ನವದೆಹಲಿ: ಯುವಕರು ವಾರಕ್ಕೆ 70 ಗಂಟೆಗಳ ಕೆಲಸ ಮಾಡಬೇಕು ಎಂದು ಸಾಫ್ಟ್ವೇರ್ ಕಂಪನಿಯಾಗಿರುವ ಇನ್ಫೊಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ನೀಡಿರುವ ಹೇಳಿಕೆ ಚರ್ಚೆಯಲ್ಲಿರುವಾಗಲೇ ಕೇಂದ್ರ ಆರೋಗ್ಯ ಸಚಿವರು ಅತಿಯಾಗಿ ಕೆಲಸ ಮಾಡಬೇಡಿ ಎಂದಿರುವ ಹೇಳಿಕೆಯೊಂದು ಕೇಳಿಬಂದಿದೆ.
ದೇಶಾದ್ಯಂತ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅತಿಯಾಗಿ ಕೆಲಸ ಮಾಡಬಾರದು ಎಂಬ ಮುನ್ನೆಚ್ಚರಿಕೆಯ ಸಂದೇಶವೊಂದನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಐಸಿಎಂಆರ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಅವರು ಈ ಮಾತನ್ನು ಹೇಳಿದ್ದಾರೆ.
ಇದನ್ನೂ ಓದಿ: ಸಾಫ್ಟ್ವೇರ್ ಉದ್ಯೋಗ: ಫ್ರೆಷರ್ಸ್ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!
ಕೋವಿಡ್-19 ಸೋಂಕಿನಿಂದ ತೀವ್ರವಾಗಿ ಬಳಲಿ ಚೇತರಿಸಿಕೊಂಡವರು ಸ್ವಲ್ಪ ಸಮಯ ಅತಿಯಾಗಿ ಕೆಲಸ ಮಾಡಬಾರದು. ಇನ್ನೂ ಒಂದೆರಡು ವರ್ಷ ಅವರು ಅದನ್ನು ಪಾಲಿಸುವುದು ಒಳಿತು ಎಂಬುದು ಐಸಿಎಂಆರ್ ನಡೆಸಿದ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಅವರು ಸಚಿವರು ತಿಳಿಸಿದ್ದಾರೆ.
ಅದರಲ್ಲೂ ಗುಜರಾತ್ನಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಅತಿಯಾಗಿದ್ದು, ಹಠಾತ್ ಕುಸಿದು ಬಿದ್ದು ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಗಾರ್ಭಾ ಸಮಾರಂಭವೊಂದರಲ್ಲಿ 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮಾತ್ರವಲ್ಲ, ಯುವಕರು ಮಧ್ಯವಯಸ್ಕರು ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪ್ರಕರಣ ಹೆಚ್ಚಾಗಿದೆ.
#WATCH | Bhavnagar, Gujarat: On heart attack cases during the Garba festival, Union Health Minister Mansukh Mandaviya says, "ICMR has done a detailed study recently. The study says that those who have had severe covid and enough amount of time has not passed, should avoid… pic.twitter.com/qswGbAHevV
— ANI (@ANI) October 30, 2023
ಯುವಕರೇಕೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಚ್ಚರಿಯೇ?: 70 ಗಂಟೆ ಕೆಲಸ.. ಮೂರ್ತಿ ವರ್ಸಸ್ ಮೂರ್ತಿ…
ಫ್ರೆಷರ್ಸ್ಗೆ ಹೋಲಿಸಿದ್ರೆ ಇನ್ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?