ಶಿಗ್ಗಾಂವಿ: ತಾಲೂಕಿನ ಹಿರೇಮಲ್ಲೂರ ಗ್ರಾಮದ ವಾರ್ಡ್ ನಂ.1ರ ಚರಂಡಿಯಲ್ಲಿ ವಿದ್ಯುತ್ ಕಂಬ ಅಳವಡಿಸಲಾಗಿದೆ. ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ.
ಕೆಲವು ವರ್ಷಗಳ ಹಿಂದೆ ಗುತ್ತಿಗೆದಾರರು ಹಳೆಯ ವಿದ್ಯುತ್ ಕಂಬ ಬದಲಿಸಿ ಹೊಸ ಕಂಬವನ್ನು ಅಳವಡಿಸಿದ್ದಾರೆ. ಮಳೆಗಾಲದಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್, ತ್ಯಾಜ್ಯವು ಕಂಬಕ್ಕೆ ಅಡ್ಡವಾಗುವುದರಿಂದ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ರಸ್ತೆಯೂ ಹಾಳಾಗುತ್ತಿದೆ.
ಕಂಬವನ್ನು ಸ್ಥಳಾಂತರಿಸಲು ಸ್ಥಳೀಯ ಗ್ರಾಮ ಪಂಚಾಯಿತಿಗೆ, ಗ್ರಾಮದ ಸದಸ್ಯರಿಗೆ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದು ಅಲ್ಲಿನ ನಿವಾಸಿಗಳು ದೂರು.