ಜಿಲ್ಲಾ ಘಟಕದ ಚುನಾವಣೆಯಲ್ಲೂ ಷಡಾಕ್ಷರಿ ಬಣ ಮೇಲುಗೈ

blank

ಬೆಂಗಳೂರು: ಸರ್ಕಾರಿ ನೌಕರರ ಸಂಘದ ಚುನಾವಣೆ ಕೊನೆಯಘಟ್ಟ ತಲುಪಿದ್ದು, ಡಿಸೆಂಬರ್ 9ರಿಂದ ರಾಜ್ಯ ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಡಿ.27ರಂದು ಮತದಾನ ನಡೆಯುವುದು.
ತಾಲೂಕು ಘಟಕ, ಜಿಲ್ಲಾ ಘಟಕ, ಬೆಂಗಳೂರು ನಗರ ಘಟಕದಿಂದ 950 ಮಂದಿ ಕೇಂದ್ರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಮತದಾನದ ಹಕ್ಕು ಪಡೆದುಕೊಂಡಿದ್ದಾರೆ.
ಬುಧವಾರ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾಲಿ ರಾಜ್ಯಾಧ್ಯಕ್ಷ ಷಡಾಕ್ಷರಿ ಬಳಿ ಮೇಲುಗೈ ಸಾಧಿಸಿದೆ. ನವೆಂಬರ್ 27ರಂದು 13 ಜಿಲ್ಲೆಗಳಲ್ಲಿ ಅವಿರೋಧ ಆಯ್ಕೆ ನಡೆದಿತ್ತು, ಉಳಿದ 18 ಜಿಲ್ಲಾ ಶಾಖೆಗಳಿಗೆ ಬುಧವಾರ ಮತದಾನ ನಡೆದಿತ್ತು.
31 ಜಿಲ್ಲಾ ಶಾಖೆಗಳ ಪೈಕಿ 27 ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ 102 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 95 ಸ್ಥಾನಗಳಲ್ಲಿ ನಮ್ಮ ಬಳಗ ಜಯಭೇರಿ ಭಾರಿಸಿದೆ ಎಂದು ಹಾಲಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿಕೊಂಡಿದ್ದಾರೆ.
ಹಿಂದಿನ ಅವಧಿಯಲ್ಲಿ ನಮ್ಮ ತಂಡ ಮಾಡಿರುವ ಕೆಲಸವನ್ನು ರಾಜ್ಯದ ಸರ್ಕಾರಿ ನೌಕರರ ಗುರುತಿಸಿ ನಮ್ಮ ತಂಡಕ್ಕೆ ಆಶೀರ್ವದಿಸಿದ್ದಾರೆ. ಆ ಕಾರಣದಿಂದ ಇಷ್ಟೊಂದು ಸಂಖ್ಯೆಯಲ್ಲಿ ನಮ್ಮ ಬಣದ ಪದಾಧಿಕಾರಿಗಳು ಆಯ್ಕೆಯಾಗಲು ಸಾಧ್ಯವಾಗಿದೆ. ಮುಂದೆಯೂ ಸಹ ಸರ್ಕಾರಿ ನೌಕರರು ನಮ್ಮ ಮೇಲೆ ಇಟ್ಟಿರುವ ಭರವಸೆ ಹಾಗೂ ವಿಶ್ವಾಸ ಉಳಿಸಿಕೊಳ್ಳುವ ಪ್ರಾಮಾಣಿಕ ಜವಾಬ್ದಾರಿ ನಮ್ಮ ತಂಡದ್ದಾಗಿದೆ ಎಂದು ಷಡಾಕ್ಷರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…