ಬೆಂಗಳೂರು: ಈ ಹಿಂದೆ ‘ಐ1’ ಎಂಬ ಸಿನಿಮಾ ಬಂದಿತ್ತು. ಅದರಲ್ಲಿ ಕಿಶೋರ್ ನಾಯಕನಾಗಿ ನಟಿಸಿದ್ದರು. ಆ ನಂತರ ಅವರು ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಇದೀಗ ಅವರು ‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಎಂಬ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ಆ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಅನಾವರಣ ಮಾಡಲಾಗಿದೆ.
ಇದನ್ನೂ ಓದಿ: ಹೊಸ ವರ್ಷಕ್ಕೆ ಸೆಟ್ಟೇರಿತು ನಾನಿ ಅಭಿನಯದ 30ನೇ ಚಿತ್ರ … ಇದು ಅಪ್ಪ-ಮಗಳ ಬಾಂಧವ್ಯದ ಕಥೆ
ಅಂದಹಾಗೆ, ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದು ಯಾರು ಗೊತ್ತಾ? ‘ಡಾರ್ಲಿಂಗ್’ ಕೃಷ್ಣ. ಹೊಸ ವರ್ಷದ ಪ್ರಯುಕ್ತ ಅವರು ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಚಿತ್ರವನ್ನು ನಿರ್ದೇಶಿಸುತ್ತಿರುವವರು ಶಿವರಾಜ್ ಸಕ್ರೆ. ಈ ಹಿಂದೆ ‘ಉಡುಂಬಾ’ ಎಂಬ ಚಿತ್ರ ನಿರ್ದೇಶಿಸಿದ್ದ ಸಕ್ರೆ, ಈಗ ಹೊಸದೊಂದು ವಿಷಯ ಇಟ್ಟುಕೊಂಡು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದೆ. ಇದೊಂದು ಥ್ರಿಲ್ಲರ್ ಕಥೆಯಂತೆ. ಆದರೆ, ಈ ಕಥೆ ಪ್ರೇಕ್ಷಕರಿಗೆ ಯಾವ ರೀತಿ ಥ್ರಿಲ್ ಕೊಡುತ್ತದೆ ಎಂಬುದನ್ನು ಇನ್ನಷ್ಟೇ ನೋಡಬೇಕು. ಏಕೆಂದರೆ, ಚಿತ್ರ ಶುರುವಾಗುವುದು ಜನವರಿ 28ಕ್ಕೆ.
ಇದನ್ನೂ ಓದಿ: ಮತ್ತೊಮ್ಮೆ ‘ಗೂಢಾಚಾರಿ’ ಆಗಲು ಹೊರಟ ಅಡವಿ ಶೇಷ್ …
‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಚಿತ್ರವನ್ನು ಶಿವರಾಜ್ ಸಕ್ರೆ ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನು ಸಹ ಅವರೇ ವಹಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕಿಶೋರ್ಗೆ ಇಬ್ಬರು ನಾಯಕಿಯರಿದ್ದಉ, ಮಿಕ್ಕಂತೆ ರಂಗಾಯಣ ರಘು, ಸುಜಯ್ ಶಾಸ್ತ್ರಿ, ಮಧುಸೂದನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸುಚೇತನ್ ರಂಗಸ್ವಾಮಿ ಸಂಗೀತ ಸಂಯೋಜಿಸುತ್ತಿದ್ದು, ಈ ಚಿತ್ರವನ್ನು ಶೈಲಜಾ ಪ್ರಕಾಶ್ ನಿರ್ಮಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆಯಂತೆ.