ಸ್ವಾಭಿಮಾನಿ ಶರಣ ಮೇಳ

blank

ಹುಬ್ಬಳ್ಳಿ: ಲಿಂಗೈಕ್ಯ ಲಿಂಗಾನಂದ ಸ್ವಾಮಿಗಳು ಮತ್ತು ಮಾತೆ ಮಹಾದೇವಿ ಅವರು ಬಸವಾದಿ ಶರಣರ ತತ್ವಗಳನ್ನು ವಿಶ್ವಖ್ಯಾತಿಗೆ ತರುವಲ್ಲಿ ತಮ್ಮ ಉಸಿರಿರುವರೆಗೂ ಶ್ರಮಿಸಿದರು ಎಂದು ರಾಷ್ಟ್ರೀಯ ಬಸವದಳದ ಮಹಾ ಸಂಘಟನಾ ಕಾರ್ಯದರ್ಶಿ ಗಂಗಾಧರ ದೊಡ್ಡವಾಡ ಹೇಳಿದರು.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮ ಸುಕ್ಷೇತ್ರದಲ್ಲಿ ಜರುಗಿದ ಸ್ವಾಭಿಮಾನಿ ಶರಣಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವನ್ನಾಗಿಸಬೇಕೆಂದು ಅವರು ಹೋರಾಡಿದರು. ಲಿಂಗಾಯತವು ಯಾವುದೇ ಒಂದು ಧರ್ಮದ ಅಡಿಯಲ್ಲಿ ಬೆಳೆಯುವ ಪಂಗಡವಲ್ಲ ಅದೊಂದು ಸ್ವತಂತ್ರ ಧರ್ಮ ಎಂದು ಅವರು ಪ್ರತಿಪಾದಿಸಿದ್ದರು ಎಂದರು.

ಇಂತಹ ಮಹಾನ್ ದಾರ್ಶನಿಕರ ತತ್ವ ಸಿದ್ಧಾಂತವನ್ನು ಪ್ರಚಾರ ಮಾಡುವಲ್ಲಿ ಜಗದ್ಗುರು ಚನ್ನಬಸವಾನಂದರು, ಮಾತೆ ಸತ್ಯಕ್ಕನವರು ಅಹೋ ರಾತ್ರಿ ಶ್ರಮಿಸುತ್ತಿದ್ದಾರೆ ಎಂದರು.

ಜಗದ್ಗುರು ಶ್ರೀ ಚನ್ನಬಸವಾನಂದ ಸ್ವಾಮೀಜಿ, ಬೆಂಗಳೂರಿನ ಶ್ರೀ ಜಯಾನಂದ ಸ್ವಾಮೀಜಿ, ಶರಣ ಬಸನಗೌಡ ಪಾಟೀಲ್, ಶಿವಪೂರ ಮಾತೆ, ಸಾವಿತ್ರಮ್ಮ ಮಾತೆ, ಶಾಂತಾದೇವಿ, ಮುಂತಾದವರು ಇದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…