More

    ಶರಾವತಿ ಮುಳುಗಡೆ ಸಂತ್ರಸ್ತರ ಒಕ್ಕಲೆಬ್ಬಿಸಲು ಬಿಡಲ್ಲ: ಡಿ.ಕೆ.ಶಿವಕುಮಾರ್

    ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರನ್ನು ಯಾವುದೇ ಕಾರಣಕ್ಕೆ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಭೂಮಿಯ ಹಕ್ಕನ್ನು ವಾಪಸ್ ಕೊಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಅಸಾಧ್ಯವಾಗದೇ ಇರುವುದು ಯಾವುದೂ ಇಲ್ಲ. ರೈತರು, ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅವರ ಪರವಾಗಿ ಪಕ್ಷ ಸದಾ ಇರಲಿದೆ ಎಂದು ಹೇಳಿದರು.
    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಮೀನು ಕೊಟ್ಟಿದ್ದೇವು. ಅರಣ್ಯದಲ್ಲಿ ಜಮೀನು ಕೊಡುವುದಕ್ಕೆ ಈಗಲೂ ಅವಕಾಶವಿದೆ. ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಹಕ್ಕುಪತ್ರ ವಿತರಿಸಿದ್ದರು. ತದನಂತರ ಬಂದ ಬಿಜೆಪಿ ಸರ್ಕಾರ ಅರಣ್ಯ ಭೂಮಿ ಡಿನೋಟಿಫಿಕೇಷನ್‌ನ್ನೇ ರದ್ದು ಮಾಡಿತು ಎಂದು ದೂರಿದರು.
    ಬಿಜೆಪಿ ನಿರ್ಲಕ್ಷೃದಿಂದ ಮುಳುಗಡೆ ಸಂತ್ರಸ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ. ಬಳ್ಳಾರಿ, ರಾಯಚೂರು ಸೇರಿದಂತೆ ಹಲವಡೆ ಜಮೀನು ಕೊಟ್ಟವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಜತೆಗೆ ಸರ್ಕಾರಿ ಕೆಲಸವನ್ನೂ ನೀಡಿದ್ದೇವೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts