More

    ಶರಾವತಿ ಹಿನ್ನೀರಿನೂರಿಗೆ ಸಿಇಒ

    ಬ್ಯಾಕೋಡು: ಶರಾವತಿ ಹಿನ್ನೀರಿನ ತುಮರಿ ಗ್ರಾಮ ಪಂಚಾಯಿತಿಗೆ ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಭೇಟಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
    ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸಾ ಔಷಧ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಮರ್ಪಕ ಔಷಧ ಇಲ್ಲದೆ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಲು ಸಾಧ್ಯ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
    ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರು ಕಾಮಗಾರಿ ಪ್ರಗತಿ ಬಗ್ಗೆ ವಿವರಣೆ ಪಡೆದರು. ಮುಂದಿನ ವರ್ಷ ಬೇಸಿಗೆಗೆ ಇಂದಿನಿಂದಲೇ ಸನ್ನದ್ಧವಾಗಿದ್ದು ಸಮಗ್ರ ಕಾರ್ಯ ಯೋಜನೆ ರೊಪಿಸಲು ಸೂಚನೆ ನೀಡಿದರು. ನೂತನ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು ಕಟ್ಟಡಕ್ಕೆ ಸರ್ಕಾರದಿಂದ 22 ಲಕ್ಷ ರೂ. ಅನುದಾನ ನೀಡಲು ಅವಕಾಶವಿರುವ ಬಗ್ಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಕಾಮಗಾರಿಯಲ್ಲಿ ಶೇ.40 ಮಾತ್ರ ಪ್ರತಿಯಾಗಿದ್ದು ಉದ್ದೇಶಿತ ಗುರಿ ಸಾಧನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಾಕಿ ಉಳಿದಿರುವ ಕಾಮಗಾರಿಯನ್ನು ಮಹಿಳಾ ಸಂಘಟನೆಗಳ ಮಾನವ ಸಂಪನ್ಮೂಲ ಬಳಸಿಕೊಂಡು ಸೂಕ್ತ ಯೋಜನೆ ರೊಪಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೋಜರಾಜಗೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts