ಶ್ರೀಲಂಕಾ ವಿರುದ್ಧದ ಸರಣಿಗೆ ಯುವ ಆಟಗಾರರ ಕಡೆಗಣನೆ; ಬಿಸಿಸಿಐ ನಡೆಗೆ ಕಿಡಿಕಾರಿದ ಸಂಸದ ಶಶಿ ತರೂರ್

shashi taroor

ನವದೆಹಲಿ: ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನೂತನ ಕೋಚ್​ ಗೌತಮ್​ ಗಂಭೀರ್​ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸುತ್ತಿದ್ದಂತೆ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತಿವಾಗುತ್ತಿದ್ದು, ಹಲವರು ನೂತನ ಕೋಚ್​ ಗಂಭೀರ್ ಹಾಗೂ ಆಯ್ಕೆ ಸಮಿತಿ ಸದಸ್ಯರ ವಿರುದ್ಧ ಕಿಡಿಕಾರಿದ್ದಾರೆ.

blank

ಇತ್ತೀಚಿಗೆ ಜಿಂಬಾಬ್ವೆ ವಿರುದ್ಧ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಶತಕ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಸಂಜು ಸ್ಯಾಮ್ಸನ್​ ಹಾಗೂ ಅಭಿಷೇಕ್​ ಶರ್ಮರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆ ಬಿಸಿಸಿಐ ಆಯ್ಕೆ ಮಾಡಿಲ್ಲ. ಈ ಬಗ್ಗೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವರು ಕಿಡಿಕಾರಿದ್ದು, ಈ ಬಗ್ಗೆ ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಂಡನ್​ನ ಬೀದಿಯಲ್ಲಿ ಪತ್ನಿ-ಮಗನೊಂದಿಗೆ ವಿರಾಟ್​ ಶಾಪಿಂಗ್​; ವಿಡಿಯೋ ವೈರಲ್

ಈ ತಿಂಗಲಾಂತ್ಯದಲ್ಲಿ ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆ ಬಹಳ ಕುತುಹಲಕಾರಿಯಾಗಿದೆ. ಇತ್ತೀಚಿನ ಸರಣಿಯಲ್ಲಿ ಶತಕ ಬಾರಿಸಿದ್ದ ಆಟಗಾರರಾದ ಸಂಜು ಸ್ಯಾಮ್ಸನ್​ ಹಾಗೂ ಅಭಿಷೇಕ್​ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಇಂತಹ ಪ್ರತಿಭಾನ್ವಿತರು ಆಯ್ಕೆಗಾರರ ಕಣ್ಣಿಗೆ ಕಾಣಲಿಲ್ವಾ ಎಂಬುದು ನನ್ನ ಪ್ರಶ್ನೆಯಾಗಿದೆ. ಹೇಗಿದ್ದರೂ ತಂಡಕ್ಕೆ ಶುಭವಾಗಲಿ ಎಂದು ಕಾಂಗ್ರೆಸ್​ ಸಂಸದ ಶಶಿ ತರೂರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

 ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆ ಟಿ20 ಮಾದರಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ತಂಡದ ನಾಯಕತ್ವವನ್ನು ರೋಹಿತ್​ ಶರ್ಮಾ ಅವರಿಗೆ ವಹಿಸಲಾಗಿದೆ. ರೋಹಿತ್​ ಶರ್ಮ ಹಾಗೂ ವಿರಾಟ್​ ಕೊಹ್ಲಿ ಅವರಿಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಈ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ರೋಹಿತ್​ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ.

Share This Article
blank

ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ! ಯಶಸ್ವಿ ಜೀವನ ನಿಮ್ಮದೆ…. successful life

successful life: ಪ್ರತಿಯೊಬ್ಬರ ಜೀವನವೂ ಅನಿರೀಕ್ಷಿತ ತಿರುವುಗಳಿಂದ ತುಂಬಿರುತ್ತದೆ. ಯಶಸ್ಸು, ವೈಫಲ್ಯ, ಸಂತೋಷ, ದುಃಖ, ಅದೃಷ್ಟ,…

ನೀವು ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಸಾಲದಲ್ಲಿ ಮುಳುಗುತ್ತಿದ್ದೀರಾ? ಇಲ್ಲಿವೆ ಸಲಹೆಗಳು..Money Tips

Money Tips: ನಾವು ದಿನ ನಿತ್ಯ ಕಷ್ಟ ಪಟ್ಟು ದುಡಿದು ಹಣ ಸಂಪಾದಿಸುತ್ತೇವೆ. ಆದರೆ ನಮ್ಮ…

blank