More

    ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!

    ಹುಬ್ಬಳ್ಳಿ: ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ತಮ್ಮ ಆಪ್ತ ಚೇತನ್ ಹಿರೇಕೆರೂರ್ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ಗೆ ಸೇರಿರುವ ಇವರು, ಈಗ ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಭೇಟಿ ನೀಡುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

    ಇದನ್ನೂ ಓದಿ: ಮಠಕ್ಕೂ ತಟ್ಟಿದ ಚುನಾವಣಾ ನೀತಿಸಂಹಿತೆ ಬಿಸಿ; ಸರಳವಾಗಿ ನೆರವೇರಲಿದೆ ನೂತನ ಉತ್ತರಾಧಿಕಾರಿಗಳ ಪಟ್ಟಾಭಿಷೇಕ

    ಚೇತನ್ ಹಿರೇಕೆರೂರ್ ನಿನ್ನೆಯಷ್ಟೇ ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದು, ಹುಬ್ಬಳ್ಳಿಯ ಕೋಟೆಲಿಂಗೇಶ್ವರ ನಗರದಲ್ಲಿರುವ ಆತನ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ ನೀಡಿ, ಕುಟುಂಬಸ್ಥರ ಜತೆ ಮಾತುಕತೆ ನಡೆಸಿದ್ದಾರೆ.

    ಇದನ್ನೂ ಓದಿ: ‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

    ಕಳೆದ ಎರಡು ದಿನಗಳ ಹಿಂದೆ ಜಗದೀಶ ಶೆಟ್ಟರ್​ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈತ ಶೆಟ್ಟರ್ ಪಕ್ಕವೇ ಇದ್ದ. ತಮ್ಮ ಆಪ್ತ ಚೇತನ್​ನ ಬಂಧನವಾಗುತ್ತಲೇ ಈತನ ಮನೆಗೆ ಶೆಟ್ಟರ್ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ. ಕುಟುಂಬಸ್ಥರೊಂದಿಗೆ ಚರ್ಚಿಸಿದ ಶೆಟ್ಟರ್ ಮಾತುಕತೆಯ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

    ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

    ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts