More

    ಶೆಟ್ಟರ್ ಹೆಸರು ಮುಂಚೂಣಿಯಲ್ಲಿ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ. ಈ ಕುರಿತು ಅಂತಿಮ ನಿರ್ಧಾರ ಪಕ್ಷದ ರಾಷ್ಟ್ರೀಯ ನಾಯಕರು ಕೈಗೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

    ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿರುವ ಕೆ.ಎಸ್. ಈಶ್ವರಪ್ಪ ಅವರ ಮನವೊಲಿಕೆ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರ ಬಂಡಾಯ ಶಮನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಶಿವಮೊಗ್ಗ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 26ಕ್ಕೆ ನಿಗದಿಯಾಗಿದೆ. ಅಂದರೆ, ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಪಕ್ಷದ ವರಿಷ್ಟರು ಈಶ್ವರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಇಲ್ಲ ಸರಿ ಮಾಡಲಿದ್ದಾರೆ ಎಂದರು.

    ಧಾರವಾಡ ಕ್ಷೇತ್ರದ ಚುನಾವಣೆ ತಯಾರಿ ನಡೆದಿದೆ. ಸದ್ಯ ಪಕ್ಷದಲ್ಲಿ ಆಂತರಿಕವಾಗಿ ಸಭೆ ನಡೆಯುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಳಿಯಲಾಗುತ್ತದೆ. ಈ ಬಾರಿ ಕ್ಷೇತ್ರದಲ್ಲಿ ಚುನಾವಣೆಗೆ 50 ದಿನಗಳಷ್ಟು ಸುದೀರ್ಘ ಅವಧಿ ಸಿಕ್ಕಿದೆ. ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಪ್ರಚಾರ ಕಾರ್ಯಕ್ಕೆ ಇಳಿಯಲಾಗುವುದು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts