ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಪ್ರಚಾರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರು ನಿಲ್ಲಿಸಿ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯರೊಂದಿಗೆ ಕೆಲಕಾಲ ಚರ್ಚಿಸಿದರು. ಅವರ ಸಮಸ್ಯೆಗಳನ್ನು ಆಲಿಸಿ, ತಮ್ಮ ಸರ್ಕಾರದಿಂದ ದೊರೆಯುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.