More

    ವಿಮಾನ ನಿಲ್ದಾಣದಿಂದ ಮಧ್ಯ ಕರ್ನಾಟಕಕ್ಕೆ ಸಂಪರ್ಕ: ಬಿ.ವೈ.ವಿಜಯೇಂದ್ರ

    ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ದೂರ ದೃಷ್ಟಿಯಿಂದ ರಾಜ್ಯದಲ್ಲೆ ಎರಡನೇ ದೊಡ್ಡ ವಿಮಾನ ನಿಲ್ದಾಣ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿದೆ. ಮಲೆನಾಡು ಜಿಲ್ಲೆಗಳು ಮಾತ್ರವಲ್ಲದೆ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಈ ವಿಮಾನ ನಿಲ್ದಾಣದಿಂದ ಅನುಕೂಲವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ವಿಮಾನ ನಿಲ್ದಾಣ ಹೊರತು ಪಡಿಸಿದರೆ ಶಿವಮೊಗ್ಗ ವಿಮಾನ ನಿಲ್ದಾಣವೇ ರಾಜ್ಯದಲ್ಲಿ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ. ಯಡಿಯೂರಪ್ಪ ಅವರ ಜನ್ಮದಿನದಂದೇ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ಖುಷಿಯ ಸಂಗತಿ ಎಂದರು.
    ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಜತೆಗೆ ಅವರು ಪ್ರತಿನಿಧಿಸುತಿದ್ದ ಶಿಕಾರಿಪುರ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಆ ಬಗ್ಗೆ ನಾನೇನು ಪ್ರತಿಕ್ರಿಯಿಸುವುದಿಲ್ಲ ಎಂದರು.
    ಜನರೆ ಕಿವಿ ಮೇಲೆ ಹೂವಿಡಲಿದ್ದಾರೆ: ಶಿವಮೊಗ್ಗದಲ್ಲಿ ಬಿಜೆಪಿ ಪೋಸ್ಟರ್‌ಗಳ ಮೇಲೆ ಕಾಂಗ್ರೆಸ್‌ನಿಂದ ಕಿವಿ ಮೇಲೆ ಹೂವು ಪೋಸ್ಟರ್ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಅವರು, ಬಜೆಟ್ ವೇಳೆಯೂ ಕಾಂಗ್ರೆಸ್ಸಿಗರು ಸದನಕ್ಕೆ ಕಿವಿ ಮೇಲೆ ಹೂವಿಟ್ಟುಕೊಂಡು ಬಂದಿದ್ದರು. ಇದೀಗ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ. ಆದರೆ ಜನರೇ ಕಾಂಗ್ರೆಸ್ಸಿಗರ ಕಿವಿ ಮೇಲೆ ಹೂವನ್ನಿಡಲಿದ್ದಾರೆ. ಆ ದಿನಗಳು ತುಂಬಾ ದೂರವಿಲ್ಲ. ಶೀಘ್ರದಲ್ಲೇ ಇದು ನಡೆಯಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts