More

    ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಮಲೆನಾಡು

    ಶಿವಮೊಗ್ಗ: ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣವು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿಂದೇ ಪ್ರಧಾನಿ ನರೇಂದ್ರ ಮೋದಿ ಅವರ ಅಭಯಹಸ್ತದಿಂದ ಲೋಕಾರ್ಪಣೆಗೊಂಡಿದ್ದು ಐತಿಹಾಸಿಕ ಕ್ಷಣಕ್ಕೆ ಮಲೆನಾಡಿನ ಲಕ್ಷಾಂತರ ಜನರು ಸೋಮವಾರ ಸಾಕ್ಷಿಯಾದರು.
    ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭವು ಜಿಲ್ಲೆಯ ಇತಿಹಾಸದಲ್ಲೇ ಅತಿ ದೊಡ್ಡ ಅಭಿವೃದ್ಧಿ ಕಾರ್ಯಕ್ರಮವಾಗಿದ್ದು ಮೂರು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
    ನೂತನ ವಿಮಾನ ನಿಲ್ದಾಣವು ಶಿವಮೊಗ್ಗ ನಗರದಿಂದ ಸುಮಾರು 10 ಕಿ.ಮೀ. ದೂರದಲ್ಲಿದ್ದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಜನರು ಕಿಕ್ಕಿರಿದು ಆಗಮಿಸಿದ್ದರು. ಕಣ್ಣು ಹಾಯಿಸಿದೆಲ್ಲೆಲ್ಲ ಜನಸ್ತೋಮವೇ ನೆರೆದಿತ್ತು. ಮಕ್ಕಳಿಯಿಂದ ವಯಸ್ಕರವರೆಗೂ ವಯಸ್ಸಿನ ಮಿತಿ ಇಲ್ಲದೇ ಜನರು ಸಾಗರೋಪಾಯದಿಯಲ್ಲಿ ಜಮಾಯಿಸಿದ್ದು ಕಾರ್ಯಕ್ರಮದ ಮೆರಗನ್ನು ಹಿಮ್ಮಡಿಗೊಳಿಸಿತು.
    ವಿಮಾನ ನಿಲ್ದಾಣಕ್ಕೆ ಬಂದ ಜನರಿಗೆ ಊಟೋಪಚಾರ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಜನದಟ್ಟಣೆ ನಿಯಂತ್ರಣ ಸೇರಿದಂತೆ ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದು ವಿಶೇಷವಾಗಿತ್ತು. ಲಕ್ಷಾಂತರ ಜನರು ಸೇರುವ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಎಂಆರ್‌ಎಸ್‌ನಿಂದ ವಿಮಾನ ನಿಲ್ದಾಣದವರೆಗೆ ವಿಐಪಿ ಮತ್ತು ವಿವಿಐಪಿಗಳಿಗೆ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಿತ್ಯ ಸಂಚಾರದ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts