ಮಹಿಳೆಗೆ ಹಣವಿರುವ ಬ್ಯಾಗ್​ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿವಮೊಗ್ಗದ ಆಟೋ ಚಾಲಕ

blank

ಶಿವಮೊಗ್ಗ: ಹಣವಿರುವ ಬ್ಯಾಗನ್ನು ಆಟೋದಲ್ಲೇ ಬಿಟ್ಟುಹೋಗಿದ್ದ ಮಹಿಳೆಗೆ ಬ್ಯಾಗ್​ ಮರಳಿಸುವ ಮೂಲಕ ಆಟೋ ಚಾಲಕ ನಾಗರಾಜ್​ ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳವಾರ ಬೆಳಗ್ಗೆ ಚನ್ನಗಿರಿ ತಾಲೂಕು ತಾವರೆಕೆರೆಯ ಮೊಹಸಿನ್​ ಎಂಬಾಕೆ ಶಿವಮೊಗ್ಗಕ್ಕೆ ಬಸ್​ನಲ್ಲಿ ಬಂದಿಳಿದಿದ್ದಾರೆ. ನಾಗರಾಜ್​ ಅವರ ಆಟೋದಲ್ಲಿ ಆಕೆ ತಿಲಕನಗರದ ಆಸ್ಪತ್ರೆಯೊಂದಕ್ಕೆ ಪ್ರಯಾಣಿಸಿದ್ದು ಆಟೋ ಇಳಿಯುವಾಗ 8,500 ರೂ. ನಗದು ಇರಿಸಿದ್ದ ಪರ್ಸ್​ ಹಾಗೂ ಬ್ಯಾಗನ್ನು ಆಟೋದಲ್ಲಿ ಬಿಟ್ಟುಹೋಗಿದ್ದಾರೆ.

ಕೆಲ ಸಮಯದ ಬಳಿಕ ಬ್ಯಾಗ್​ ಅನ್ನು ಗಮನಿಸಿದ ನಾಗರಾಜ್​, ಸಂಚಾರ ಠಾಣೆ ಪೊಲೀಸರಿಗೆ ಬ್ಯಾಗ್​ ಒಪ್ಪಿಸಿ ಮಹಿಳೆ ಆಸ್ಪತ್ರೆ ಹೋಗಿದ್ದನ್ನು ತಿಳಿಸಿದರು. ಇದಿಷ್ಟು ನಡೆದ ಕೆಲವೇ ತಾಸಿನಲ್ಲಿ ಮಹಿಳೆಯನ್ನು ಪತ್ತೆ ಮಾಡಿದ ಪೊಲೀಸರು ಠಾಣೆಗೆ ಕರೆಸಿಕೊಂಡಿದ್ದಾರೆ. ಅತ್ತ ನಾಗರಾಜ್​ ಅವರನ್ನೂ ಕರೆಸಿಕೊಂಡು ಅವರ ಮೂಲಕವೇ ಮಹಿಳೆಗೆ ಬ್ಯಾಗ್​ ಮರಳಿಸಿದ್ದಾರೆ. ಟ್ರಾಫಿಕ್​ ಪೊಲೀಸ್​ ಇನ್ಸ್​ಪೆಕ್ಟರ್​ ಸಂತೋಷ್​ಕುಮಾರ್​ ಸಮ್ಮುಖದಲ್ಲಿ ಮಹಿಳೆಗೆ ಹಣವಿದ್ದ ಬ್ಯಾಗ್​ ಅನ್ನು ನಾಗರಾಜ್​ ಮರಳಿಸಿದರು.

ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಅವಘಡ: ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯರಿಬ್ಬರ ದುರ್ಮರಣ

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…

ಪ್ರತಿದಿನ 1 ದಾಳಿಂಬೆ ಸೇವನೆಯಿಂದಾಗುವ ಪ್ರಯೋಜನಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ದಾಳಿಂಬೆ ಪೋಷಕಾಂಶಗಳಿಂದ ತುಂಬಿದೆ ಎಂಬುದು ಮುಚ್ಚಿಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪ್ರತಿಯೊಬ್ಬರೂ ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು…

ಧೂಮಪಾನ ಬಿಡಲು ಮನಸ್ಸಿದ್ದರೂ ಸಾಧ್ಯವಾಗುತ್ತಿಲ್ಲವೇ?; ನಿಮಗಾಗಿಯೇ ಈ ಟ್ರಿಕ್ಸ್​ | Health Tips

ಪ್ರತ್ಯಕ್ಷವಾಗೋ ಅಥವಾ ಪರೋಕ್ಷವಾಗೋ ನಾವೆಲ್ಲರೂ ನಿಷ್ಕ್ರಿಯ ಧೂಮಪಾನಿಗಳು. ಏಕೆಂದರೆ ನಮ್ಮ ಸುತ್ತಲೂ ಯಾವಾಗಲೂ ಯಾರಾದರೂ ಸಿಗರೇಟ್…