More

    ಇರಿತ ಪ್ರಕರಣದ ಆರೋಪಿ ಮೇಲೆ ಫೈರಿಂಗ್

    ಶಿವಮೊಗ್ಗ: ರಾಯಲ್ ಆರ್ಕಿಡ್ ಹೋಟೆಲ್ ಬಳಿ ಪಾದಚಾರಿಗೆ ಇರಿದು ಹಲ್ಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಬಂಧನದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಇರಿಯಲೆತ್ನಿಸಿದ್ದು ಪೊಲೀಸರು ಅವನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ಬಿದ್ದಿರುವ ಆರೋಪಿ ಮತ್ತು ದಾಳಿಯಿಂದ ತಪ್ಪಿಕೊಳ್ಳಲೆತ್ನಿಸಿದಾಗ ಬಿದ್ದು ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
    ರಾಯಲ್ ಆರ್ಕಿಡ್ ಬಳಿ ಅ. 30ರಂದು ನಡೆದುಕೊಂಡು ಹೊರಟಿದ್ದ ಶಿವಾಜಿ ರಸ್ತೆಯ ಅಶೋಕ್‌ಪ್ರಭು ಎಂಬುವರ ಮುಖಕ್ಕೆ ಬೈಕ್‌ನಲ್ಲಿ ಬಂದ ನಾಲ್ವರು ಆಯುಧದಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದರು.
    ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಆಸೀಫ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಪುರಲೆ ಸಮೀಪದ ಖಾಸಗಿ ಲೇಔಟ್‌ನಲ್ಲಿ ಅಡಗಿದ್ದ ಪ್ರಮುಖ ಆರೋಪಿ ಅಸ್ಲಾಂನನ್ನು ಬಂಧಿಸಲು ಪೊಲೀಸರು ದಾಳಿ ಮಾಡಿದಾಗ ಪೇದೆ ರಮೇಶ್ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದ. ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ರಮೇಶ್ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಹಲ್ಲೆಗೆ ಯತ್ನಿಸಿದ ಅಸ್ಲಾಂ ಕಾಲಿಗೆ ದೊಡ್ಡಪೇಟೆ ಠಾಣೆ ಪಿಎಸ್‌ಐ ವಸಂತ್ ಗುಂಡು ಹಾರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts