More

    ಸ್ಮಾರ್ಟ್ ಸಿಟಿ ಎಂಡಿ ಹಠಾವೋ ಶಿವಮೊಗ್ಗ ಬಚಾವೋ

    ಶಿವಮೊಗ್ಗ: ಸ್ಮಾರ್ಟ್ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಇಂಜಿನಿಯರ್ ವಿಜಯಕುಮಾರ್ ವಿರುದ್ಧ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳ ಪ್ರತಿಭಟನಾ ಸರಣಿ ಮುಂದುವರಿದಿದೆ. ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಇವರಿಬ್ಬರನ್ನೂ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ಅ.2ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.
    ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆಯಡಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇದರಲ್ಲಿ ಅಳವಡಿಸಿರುವ ಮಾಹಿತಿ ಫಲಕ ನಾಗರಿಕರ ತಲೆಗೆ ತಗುಲುವಷ್ಟು ಕೆಳಮಟ್ಟದಲ್ಲಿವೆ. ಇದನ್ನು ಸ್ವಲ್ಪ ಮೇಲ್ಭಾಗದಲ್ಲಿ ಅಳವಡಿಸುವಂತೆ ಮನವಿ ಮಾಡಿದರೂ ಸ್ಪಂದಿಸಿಲ್ಲ ಎಂದು ದೂರಿದರು.
    ನಗರದೆಲ್ಲೆಡೆ ಇಂತಹ ಅವೈಜ್ಞಾನಿಕ ಕಾಮಗಾರಿಗಳನ್ನು ಮಾಡಿ ಜನರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಒಂದು ಅವೈಜ್ಞಾನಿಕ ಕೆಲಸ ಮರೆ ಮಾಚಲು ಮತ್ತೊಂದು ಅವೈಜ್ಞಾನಿಕ ಕಾಮಗಾರಿ ಮಾಡುತ್ತಾರೆ. ಇಡೀ ನಗರದಲ್ಲಿ ಅವೈಜ್ಞಾನಿಕ ಕಾಮಗಾರಿಗಳೇ ಕಾಣುತ್ತಿವೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಒತ್ತಾಯಿಸಿದರು.
    ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತಕುಮಾರ್, ಸಂಘಟನಾ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಪ್ರಮುಖರಾದ ನಾಗರಾಜ್, ಚನ್ನವೀರಪ್ಪ ಗಾಮನಗಟ್ಟಿ ಮುಂತಾದವರು ಪ್ರತಿಭಟನೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts