ನವದೆಹಲಿ: ಆಕಾಶದೆಡೆಗೆ ಟಾರ್ಚ್ಗಳನ್ನು ಬೆಳಗುವುದರಿಂದ ಕರೊನಾ ವೈರಸ್ ಸೋಂಕಿನ ಹರಡುವಿಕೆ ತಡೆಗಟ್ಟಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾನುವಾರ ರಾತ್ರಿ 9 ಗಂಟೆಗೆ ಎಣ್ಣೆದೀಪ ಹಚ್ಚುವುದು, ಮೊಬೈಲ್ಫೋನ್ಗಳ ಫ್ಲ್ಯಾಶ್ ಲೈಟ್ ಬೆಳಗುವ ಮೂಲಕ ಕರೋನಾ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಅವರ ಈ ಕ್ರಮವನ್ನು ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಕೋವಿಡ್ 19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚೆಚ್ಚು ಪರೀಕ್ಷಾ ಕೇಂದ್ರಗಳನ್ನು ಆರಂಭಿಸುವ ಅವಶ್ಯಕತೆ ಇದೆ. ಸರ್ಕಾರ ಇದನ್ನು ಮಾಡಬೇಕು. ಅದು ಬಿಟ್ಟು ಚಪ್ಪಾಳೆ ತಟ್ಟಿ, ದೀಪ ಬೆಳಗಿ ಎಂದು ಹೇಳುವುದು ಸರಿಯಲ್ಲ. ಇದರಿಂದ ರಾಷ್ಟ್ರದಲ್ಲಿನ ಪರಿಸ್ಥಿತಿ ಸುಧಾರಿಸುವುದಿಲ್ಲ ಎಂದು ಟ್ವೀಟ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ನೆರವು ನೀಡಿ: ಇದಕ್ಕೂ ಮುನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ್ದ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ, ಕರೊನಾ ಸೋಂಕಿನ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಬಲ ತುಂಬಬೇಕು. ಅವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ಸಲಹೆ ನೀಡಿದ್ದರು.
ಎಲ್ಲ ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ನೆರವು ನೀಡಬೇಕು. ಜತೆಗೆ ಬಾಕಿವುಳಿಸಿಕೊಂಡಿರುವ 42 ಸಾವಿರ ಕೋಟಿ ರೂ. ಜಿಎಸ್ಟಿಯ ಪಾಲನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಅನುಮತಿ ಪಡೆದುಕೊಂಡು ಎಲ್ಲ ರಾಜ್ಯಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಚಿಂತನೆ ನಡೆಸಬೇಕು ಎಂದು ಹೇಳಿದ್ದರು.
ಜನರು ದೀಪ ಹಚ್ಚಲು ಹಚ್ಚಲು ಹೋಗಿ ತಮ್ಮ ಮನೆಗೇ ಬೆಂಕಿ ಇಟ್ಟು ಸುಟ್ಟುಕೊಳ್ಳದಿದ್ದರೆ ಸಾಕು…’ ಮೋದಿಯವರನ್ನು ವ್ಯಂಗ್ಯವಾಡಿದ ಶಿವಸೇನೆ ನಾಯಕ
‘ದೀಪ ಬೆಳಗೋಣ..’ ಎಂದು ಕರೆ ನೀಡಿದ ಪ್ರಧಾನಮಂತ್ರಿ ಮೋದಿ: ಇದಕ್ಕೆ ‘ನೀವೇನಂತೀರಿ’ ಎಂದು ಕೇಳಿದ್ದಕ್ಕೆ ‘ನಿದ್ದೆ ಬಂದರೆ ಮಾಡ್ತೀನಿ’ ಎಂದ್ರು ದೀದಿ