More

    ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಿ

    ಜಿಲ್ಲಾ ಹಡಪದ ಕ್ಷೌರಿಕ ಸಮಾಜ ಸಂಘ ಒತ್ತಾಯ ಸರ್ಕಾರಕ್ಕೆ ಮನವಿ

    ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾ ಹಡಪದ ಕ್ಷೌರಿಕ ಸಮಾಜ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

    ಹಡಪದ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ವಾರ್ಷಿಕ ಬಜೆಟ್‌ನಲ್ಲಿ ಹಡಪದ ಸಮಾಜಕ್ಕಾಗಿ ವಿಶೇಷ ಅನುದಾನ ಮೀಸಲಿಡಬೇಕು. ವೃತ್ತಿನಿರತ ಸಮಾಜದ ಜನರಿಗೆ ಉಚಿತವಾಗಿ ಆರೋಗ್ಯ ವಿಮಾ ಸೌಲಭ್ಯ ಹಾಗೂ ಆರೋಗ್ಯ ವಿಮಾ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಮನವಿ ಮೂಲಕ ಕೋರಿದರು.

    ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವೃತ್ತಿನಿರತ ಹಡಪದ ಸಮಾಜದವರಿಗೆ ಗ್ರಾಪಂ, ಪಪಂ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಮೀಸಲಿಡಬೇಕು. ಕಾರ್ಮಿಕ ಕಲ್ಯಾಣ ನಿಧಿಯಿಂದ ವೃತ್ತಿನಿರತರಿಗೆ ಸೌಲಭ್ಯ ಕಲ್ಪಿಸಬೇಕು. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿ ಸಂದರ್ಭದಲ್ಲಿ ಹಡಪದ ಸಮಾಜದ ಮಹಿಳೆಯರಿಗೆ ವಿಶೇಷ ಅವಕಾಶ ಕಲ್ಪಿಸಬೇಕು ಎಂದು ಮನವಿ ನೀಡಿದರು.

    ಜಿಲ್ಲಾಧ್ಯಕ್ಷ ಸುರೇಶ ಹಡಪದ, ಕಾರ್ಯದರ್ಶಿ ಸಂತೋಷ ಹಡಪದ, ಆನಂದ ಕುರ್ಲಿ, ನಾಗಪ್ಪ ಹಡಪದ, ರಾಜು ನಾವಿ, ಮಲ್ಲೇಶ ನಾವಿ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts