ಶಿರಾಡಿ ಘಾಟ್ ರಸ್ತೆ;ಸಿಎಂ ನೇತೃತ್ವದಲ್ಲಿ ಸಭೆ


ಬೆಂಗಳೂರು:
ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ಸೇರಿ 7 ಘಾಟ್‌ಗಳ ರಸ್ತೆ ಅಭಿವೃದ್ಧಿಗೆ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಕ್ರಮ ವಹಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು,
7 ಘಾಟಿ ರಸ್ತೆಯಲ್ಲಿ 5 ರಾಷ್ಟ್ರೀಯ ಹೆದ್ದಾರಿಗೆ, ಇನ್ನೆರಡು ರಾಜ್ಯಕ್ಕೆ ಸೇರುತ್ತವೆ ಎಂದರು.
ಈ ರಸ್ತೆಯಲ್ಲಿ ಓಡಾಡಲು ಆತಂಕ ಸೃಷ್ಟಿಸಿದೆ, ಶಿರೂರಿನ ರೀತಿ ಗುಡ್ಡ ಕುಸಿತ ಭೀತಿ ಇದೆ. ಹೀಗಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿ ಒಂದು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಾರಿ ಹೆಚ್ಚಿನ ಮಳೆಯಾದ್ದರಿಂದ ಈ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರಕ್ಕೆ ನಾವು ಪ್ರಸ್ತಾವನೆ ಮಾಡಬಹುದು ಎಂದರು.
ಕರಾವಳಿಗೆ ಸಂಪರ್ಕ ಕೊಂಡಿಯಾಗಿರುವ ಘಾಟಿ ಪರಿಸರದಲ್ಲಿನ ಹೆದ್ದಾರಿಯಲ್ಲಿ ಹೆಚ್ಚು ಮಳೆಯಿಂದಾಗಿ ರಸ್ತೆ ಕುಸಿತದಿಂದ ಸಂಚಾರ ವ್ಯತ್ಯಯ ಉಂಟಾಗುತ್ತಿದೆ ಎಂದು ನಾಯಕ್ ಗಮನ ಸೆಳೆದಿದ್ದರು.

TAGGED:
Share This Article

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…

Tea….ಒಂದು ತಿಂಗಳು ಟೀ ಕುಡಿಯುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?

Tea: ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಟೀ ಕುಡಿದರೆ ಸಿಗುವ ಸಂತೋಷ ಅಷ್ಟಿಷ್ಟಲ್ಲ. ಹಾಗಿದ್ದರೂ,…

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…