ಮುಂಬೈ: ಸಾಯಿ ಬಾಬಾನ ಜನ್ಮ ಸ್ಥಳಕ್ಕೆ ಸಂಬಂಧಿಸಿದಂತೆ ವಾದ ವಿವಾದಗಳು ಎದ್ದಿದ್ದು, ಈ ಸಂಬಂಧ ನಾಳೆಯಿಂದ ಶಿರಡಿ ಸಾಯಿ ಬಾಬಾ ಮಂದಿರ ಮುಚ್ಚಲಿದೆ.
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಭಾನಿ ಜಿಲ್ಲೆಯ ಪಥ್ರಿ ಎಂಬ ಗ್ರಾಮವೇ ಸಾಯಿ ಬಾಬಾ ಅವರ ಜನ್ಮ ಸ್ಥಳ ಎಂದಿದ್ದರು. ಅಲ್ಲದೆ ಈ ಬಾರಿ ಬಜೆಟ್ನಲ್ಲಿ ಸಾಯಿ ಬಾಬಾ ಜನ್ಮ ಸ್ಥಳವಾದ ಪಥ್ರಿ ಅಭಿವೃದ್ಧಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದರು.
ಉದ್ಧವ್ ಠಾಕ್ರೆ ಅವರ ಈ ಹೇಳಿಕೆಯಿಂದಾಗಿ ವಿವಾದ ಉಂಟಾಗಿತ್ತು. ಈ ನಡುವೆ ಶಿರಡಿಯ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಭಾನುವಾರದಿಂದ ದೇಗುಲ ಬಂದ್ ಮಾಡಲಾಗುವುದು ಎಂದು ತಿಳಿಸಿದೆ.
ಸಾಯಿ ಬಾಬಾ ಸಂಸ್ಥಾನ ಟ್ರಸ್ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಚರ್ಚಿಸಲು ಇಂದು ಸಭೆ ಆಯೊಜಿಸಿದೆ. ಇದರಲ್ಲಿ ಟ್ರಸ್ಟ್ನವರು ಮತ್ತು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟಿ ತಿಳಿಸಿದ್ದಾರೆ. (ಏಜೆನ್ಸೀಸ್)