More

    ಸಾಯಿ ಬಾಬಾ ಜನ್ಮ ಸ್ಥಳ ಪ್ರಭಾನಿ ಜಿಲ್ಲೆಯ ಪಥ್ರಿ; ವಿವಾದಾತ್ಮಕ ಹೇಳಿಕೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ

    ಮುಂಬೈ: ಸಾಯಿ ಬಾಬಾನ ಜನ್ಮ ಸ್ಥಳಕ್ಕೆ ಸಂಬಂಧಿಸಿದಂತೆ ವಾದ ವಿವಾದಗಳು ಎದ್ದಿದ್ದು, ಈ ಸಂಬಂಧ ನಾಳೆಯಿಂದ ಶಿರಡಿ ಸಾಯಿ ಬಾಬಾ ಮಂದಿರ ಮುಚ್ಚಲಿದೆ.

    ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ಪ್ರಭಾನಿ ಜಿಲ್ಲೆಯ ಪಥ್ರಿ ಎಂಬ ಗ್ರಾಮವೇ ಸಾಯಿ ಬಾಬಾ ಅವರ ಜನ್ಮ ಸ್ಥಳ ಎಂದಿದ್ದರು. ಅಲ್ಲದೆ ಈ ಬಾರಿ ಬಜೆಟ್​ನಲ್ಲಿ ಸಾಯಿ ಬಾಬಾ ಜನ್ಮ ಸ್ಥಳವಾದ ಪಥ್ರಿ ಅಭಿವೃದ್ಧಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದರು.

    ಉದ್ಧವ್​ ಠಾಕ್ರೆ ಅವರ ಈ ಹೇಳಿಕೆಯಿಂದಾಗಿ ವಿವಾದ ಉಂಟಾಗಿತ್ತು. ಈ ನಡುವೆ ಶಿರಡಿಯ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್​ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಭಾನುವಾರದಿಂದ ದೇಗುಲ ಬಂದ್​ ಮಾಡಲಾಗುವುದು ಎಂದು ತಿಳಿಸಿದೆ.

    ಸಾಯಿ ಬಾಬಾ ಸಂಸ್ಥಾನ ಟ್ರಸ್​​ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಚರ್ಚಿಸಲು ಇಂದು ಸಭೆ ಆಯೊಜಿಸಿದೆ. ಇದರಲ್ಲಿ ಟ್ರಸ್ಟ್​ನವರು ಮತ್ತು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟಿ ತಿಳಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts