More

    ಪ್ರಧಾನಿ ಮೋದಿ ಬೌಲಿಂಗ್, ಶಾ ಬ್ಯಾಟಿಂಗ್..ಕಪ್​ ಗೆಲ್ಲಲೇಬೇಕು ಎಂದಿದ್ದೇಕೆ ಶಿವಸೇನೆ ಸಂಸದ?

    ಮುಂಬೈ: ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ಬಿರುಸಿನಿಂದ ನಡೆಯುತ್ತಿದೆ. ಈ ಫೈನಲ್ ಪಂದ್ಯದ ಆರಂಭದಲ್ಲೇ ದೇಶಾದ್ಯಂತ ಕೋಟಿಗಟ್ಟಲೆ ಜನ ವೀಕ್ಷಿಸುವಲ್ಲಿ ತಲ್ಲೀನರಾಗಿದ್ದರು. ಆದರೆ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್ ಪಂದ್ಯ ನಡೆಸುತ್ತಿರುವ ರೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

    ಇದನ್ನೂ ಓದಿ: ‘ನನ್ನ ಜನ ನನಗೆ ಮೋಸ ಮಾಡಿದರು’: ಮನಬಿಚ್ಚಿ ಮಾತನಾಡಿರುವ ಗಾಯಕಿ ಸುನೀತಾ ವೀಡಿಯೋ ವೈರಲ್…
    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಫೈನಲ್ಸ್ ಅನ್ನು ಕ್ರಿಕೆಟ್ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ ಬಿಜೆಪಿ ಕಾರ್ಯಕ್ರಮದಂತೆ ನಡೆಸಲಾಗುತ್ತಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

    “ಇಂದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪ್ರಧಾನಿ ಮೋದಿ ಬೌಲಿಂಗ್ ಮಾಡುತ್ತಿದ್ದಾರೆ. ಅಮಿತ್ ಶಾ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮಾಡುತ್ತಿದ್ದಾರೆ” ಎಂದು ಕ್ರಿಕೆಟ್ ಭಾಷೆಯಲ್ಲಿ ವ್ಯಂಗ್ಯವಾಗಿ ಟೀಕಿಸಿದರು.

    ಕ್ರಿಕೆಟ್‌ನಲ್ಲಿ ರಾಜಕೀಯವನ್ನು ತರುವ ಅಗತ್ಯವಿಲ್ಲ. ಆದರೆ ಅದು ಅಹಮದಾಬಾದ್‌ನಲ್ಲಿ ನಡೆಯುತ್ತಿದೆ ಎಂದು ರಾವುತ್ ಹೇಳಿದರು.
    ಪ್ರಧಾನಿ ಮೋದಿ ಇರುವುದರಿಂದ ಭಾರತ ಖಂಡಿತಾ ಕಪ್ ಗೆಲ್ಲಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಐಸಿಸಿ ಕ್ರಿಕೆಟ್ ವಿಶ್ವಕಪ್ ನ ಫೈನಲ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ವೀಕ್ಷಿಸಲಿದ್ದಾರೆ ಎಂದು ಶನಿವಾರ ಅಧಿಕೃತ ಪ್ರಕಟಣೆ ಹೊರಬಿದ್ದಿದ್ದು ಗೊತ್ತೇ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts