More

    ಶಿವಾಜಿ ಜೀವನ ಚರಿತ್ರೆ ಪುಸ್ತಕಕ್ಕೆ ಸೀಮಿತವಾಗದಿರಲಿ

    ಹುಬ್ಬಳ್ಳಿ: ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು.

    ಇಲ್ಲಿಯ ಮಿನಿ ವಿಧಾನಸೌಧದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಶಿವಾಜಿ ಅವರ ಆದರ್ಶಗಳು, ಕಾರ್ಯಗಳು, ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅವರ ಒಳ್ಳೆಯ ಸಂದೇಶಗಳನ್ನು ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.

    ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದು. ಇಂಥ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ಸಮಾಜದ ಮುಖಂಡರಾದ ಸುನೀಲ ದಳವಿ, ಶಿವುಕುಮಾರ ಶಿಂಧೆ, ನಾರಾಯಣ ವೈದ್ಯ, ಗುರುನಾಥ ಉಳ್ಳಿಕಾಶಿ, ಅರುಣ ಶಿರ್ಕೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ನಿಟ್ಟೂರ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts