ಬೆಂಗಳೂರು: ಕಾಲಿನಲ್ಲಿ ಇದ್ದಕ್ಕಿದ್ದಂತೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮೂರಿಗೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಕಾನ್ಸ್ಟೆಬಲ್ ಚಿಕಿತ್ಸೆ ಫಲಕಾರಿಯಾಗದೇ ದುರಂತ ಸಾವಿಗೀಡಾಗಿದ್ದಾರೆ.
ಜೀವನ್ ಮೃತ ಕಾನ್ಸ್ಟೆಬಲ್. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಾಲು ನೋವು ಕಾಣಿಸಿಕೊಂಡಿತು. ತಕ್ಷಣ ತಮ್ಮ ಊರಾದ ಶಿವಮೊಗ್ಗಕ್ಕೆ ತೆರಳಿದರು.
ಇದನ್ನೂ ಓದಿ: ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ
ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಜೀವನ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಕಾಲು ನೋವು ಮತ್ತಷ್ಟು ಹೆಚ್ಚಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಪರೇಷನ್ ಮಾಡಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಜೀವನ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಾ ಕುಟುಂಬದ ಆಧಾರವಾಗಿದ್ದ ಜೀವನ್ ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಬರಸಿಡಿಲಂತೆ ಅಪ್ಪಳಿಸಿದೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್)
ಅಭಿವೃದ್ಧಿ ಕಾರ್ಯಕ್ಕಿಂತ ಗ್ಯಾರಂಟಿ ಜಾರಿಗೇ ನಮ್ಮ ಮೊದಲ ಆದ್ಯತೆ: ಸಚಿವ ಡಾ.ಜಿ. ಪರಮೇಶ್ವರ್
500 ರೂ. ಹಂಚಿಕೊಳ್ಳುವ ವಿಚಾರಕ್ಕೆ ಗಲಾಟೆ; ಸ್ನೇಹಿತನ ಕೊಲೆ ಮಾಡಿದವನ ಬಂಧನ