ಮನಸ್ಸು ಪರಿಶುದ್ಧವಾಗಿದ್ದರೆ ನೆಮ್ಮದಿ

blank

ಹೊಳೆಹೊನ್ನೂರು: ಬದುಕಿನ ಹಾದಿಯಲ್ಲಿ ಮನುಷ್ಯ ಒಳ್ಳೆಯ ಸಂಗತಿಗಳ ಕಡೆಗೆ ಮನಸ್ಸನ್ನು ತೊಡಗಿಸಿಕೊಳ್ಳಬೇಕು ಎಂದು ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ಆನವೇರಿ ಶ್ರೀ ಬನಶಂಕರಿ ದೇವಸ್ಥಾನದಲ್ಲಿ 6ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಭಿಷೇಕ ಅಷ್ಟೋತ್ತರ ಹಾಗೂ ಇಷ್ಟಲಿಂಗ ಪೂಜೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಐಷರಾಮಿ ಸುಖ ಜೀವನದ ತುಡಿತದಲ್ಲಿ ಮನುಷ್ಯನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ ಎಂದು ತಿಳಿಸಿದರು.

ಸಮಾಜದಲ್ಲಿ ಅನ್ಯಾಯ, ಅಧರ್ಮ ಸೇರಿ ಅನೀತಿಗಳು ತಾಂಡವವಾಡುತ್ತಿವೆ. ಸಮಾಜದಲ್ಲಿ ವ್ಯಕ್ತಿಗಳು ಧರ್ಮಮಾರ್ಗದಲ್ಲಿ ನಡೆಯಬೇಕು. ಅನ್ಯಾಯ ಮಾರ್ಗಗಳಿಂದ ಗಳಿಸಿದ ಸಂಪತ್ತು ಎಂದಿಗೂ ಶಾಶ್ವತವಲ್ಲ. ಶರೀರದಲ್ಲಿನ ಮನಸ್ಸು ಪರಿಶುದ್ಧವಾದಾಗ ಮಾತ್ರ ವ್ಯಕ್ತಿಗಳಿಂದ ಒಳ್ಳೆಯದನ್ನು ನಿರೀಕ್ಷಿಸಲು ಸಾಧ್ಯ ಎಂದರು.

ಅಲ್ಪಾವಧಿಯಲ್ಲಿ ಅಧಿಕ ಸಂಪತ್ತು ಗಳಿಸುವ ವಿಷವರ್ತುಲದಲ್ಲಿ ಸಿಲುಕಿಕೊಂಡ ಜನರ ಜೀವನ ಅಜ್ಞಾನದತ್ತ ಸಾಗುತ್ತಿದೆ. ಒಳ್ಳೆಯ ಚಿಂತನೆಗಳನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಗ್ರಾಮದ ಪ್ರತಿಯೊಬ್ಬರೂ ಒಟ್ಟಾಗಿ ಸೇರಿ ಧಾರ್ಮಿಕ ಕಾರ್ಯಗಳಿಗೆ ಕೈಜೋಡಿಸಬೇಕು. ಗಳಿಸಿದ ದುಡಿಮೆಯಲ್ಲಿ ಅಲ್ಪಭಾಗ ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಬೇಕು ಎಂದು ಸಲಹೆ ನೀಡಿದರು. ದೇವಸ್ಥಾನ ಕಮಿಟಿಯ ನಾಗರಾಜಪ್ಪ, ಪರಮೇಶ್ವರಪ್ಪ, ರಾಜು, ಗುರುಮೂರ್ತಿ, ಜಗದೀಶ್, ಪ್ರದೀಪ್, ಈಶಪ್ಪ, ರಂಗೇಶ್ ಇತರರಿದ್ದರು.

ಸದ್ವಿಚಾರ ವೃದ್ಧಿಸುವ ದೈವಿಕ ಚಿಂತನೆ

Share This Article

ಮೂತ್ರ ವಿಸರ್ಜಿಸಲು ತೊಂದರೆ ಅನುಭವಿಸುತ್ತಿದ್ದಿರಾ; ಇಲ್ಲಿದೆ ಅದರ ಹಿಂದಿನ ಕಾರಣದ ಮಾಹಿತಿ| Health Tips

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ಯಾರಿಗಾದರೂ ಮೂತ್ರ ವಿಸರ್ಜನೆಯಲ್ಲಿ ತೊಂದರೆ ಇದ್ದರೆ ಅದರ ಹಿಂದೆ ಹಲವು ಕಾರಣಗಳಿರಬಹುದು.…

Brown or White Bread.. ಯಾವುದು ಆರೋಗ್ಯಕ್ಕೆ ಉತ್ತಮ; ತಜ್ಞರು ಹೇಳೊದೇನು? | Health Tips

ಆರೋಗ್ಯದ ಕಾರಣಗಳಿಗಾಗಿ ನೀವು ವೈಟ್​ ಬ್ರೆಡ್ ಬದಲಿಗೆ ಬ್ರೌನ್​ ಬ್ರೆಡ್ ತಿನ್ನುತ್ತೀರಾ? ಸರಿ. ನೀವು ಮಾತ್ರವಲ್ಲ…

ಹೆಲ್ಮೆಟ್​ ಬಳಸುವುದರಿಂದ ಕೂದಲು ಉದುರುತ್ತಿದೆಯೇ? ಇಲ್ಲಿದೆ ನೋಡಿ ಸಿಂಪಲ್​ ಟಿಪ್ಸ್​…! Hair Loss

Hair Loss : ಅತಿಯಾಗಿ ಹೆಲ್ಮೆಟ್​ ಬಳಸುವ ಸವಾರರಲ್ಲಿ ಕೂದಲು ಉದುರುವಿಕೆ ಮತ್ತು ತಲೆಹೊಟ್ಟಿನ ಸಮಸ್ಯೆ…