ಮಳೆಯಿಂದ ಹಲವು ಮನೆಗಳಿಗೆ ಹಾನಿ

blank

ತೀರ್ಥಹಳ್ಳಿ: ತಾಲೂಕಿನಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿದ್ದು, ಎರಡು ದಿನಗಳಿಂದ ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.

ನಾಲೂರು ಗ್ರಾಪಂ ವ್ಯಾಪ್ತಿಯ ಕೊಳಗಿ ದುಗ್ಗಮ್ಮ ಎಂಬುವರ ಮನೆ ಗೋಡೆ ಕುಸಿದಿದೆ. ಅರಳಸುರುಳಿ ಸಮೀಪದ ಶಂಕರಪುರ ಗ್ರಾಮದ ಸವಿತಾ ವಿಜಯಕುಮಾರ್ ಎಂಬುವರ ಕೊಟ್ಟಿಗೆ ಮಳೆಯಿಂದ ಕುಸಿದಿದೆ. ರಾಘವೇಂದ್ರ ಅವರ ಮನೆ ಛಾವಣಿ ಮತ್ತು ಗೋಡೆ ಕುಸಿದಿದೆ.

ಸಿಂಗನಬಿದಿರೆ ಗ್ರಾಪಂ ವ್ಯಾಪ್ತಿಯ ಸ್ವಸ್ತಿಗದ್ದೆ ಗ್ರಾಮದ ಶೋಭಾ ಚಂದ್ರ ಎಂಬುವರ ಮನೆ ಮೇಲೆ ಮರ ಬಿದ್ದು ಛಾವಣಿ ಹಾನಿಗೀಡಾಗಿದೆ. ಶೇಡ್ಗಾರು ಗ್ರಾಮದ ನಾಗೇಶ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದೆ. ಹಾರೋಗುಳಿಗೆ ಗ್ರಾಪಂ ವೃತ್ತದ ಅಂದಗೆರೆ ಗ್ರಾಮದಲ್ಲಿ ಮರ ಬಿದ್ದು ಮೂರ್ತಿ ಆಚಾರ್ ಎಂಬುವರ ಮನೆ ಮತ್ತು ಕೊಟ್ಟಿಗೆಗೆ ಹಾನಿಯಾಗಿದೆ. ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿರುವ ಕಂದಾಯ ಇಲಾಖೆ ಅಧಿಕಾರಿಗಳು ನಷ್ಟದ ವರದಿ ಸಿದ್ಧಪಡಿಸಿದ್ದಾರೆ.

ರಸ್ತೆ ಮೇಲೆ ಹಳ್ಳದಂತೆ ಹರಿವು

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…