More

    ಜೈ ಶ್ರೀರಾಮ್ ಎಂದರೆ ಏಕೆ ಕೋಪ: ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆ

    ಶಿವಮೊಗ್ಗ: ಜೈ ಶ್ರೀರಾಮ್, ಭಾರತ್ ಮಾತಾ ಕೀ ಜೈ ಎಂದರೆ ಶಾಸಕ ಬಿ.ಕೆ.ಸಂಗಮೇಶ್ವರ ಹಾಗೂ ಅವರ ಮಕ್ಕಳಿಗೇಕೆ ಕೋಪ? ಬಹುಶಃ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರೆ ಅವರಿಗೆ ಖುಷಿಯಾಗುತ್ತಿತ್ತೋ ಏನೋ? ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದರು.
    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾಗಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಥವಾ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಾಗಲೀ ತಪ್ಪು ಮಾಡಿದ್ದರೆ ಕಾಂಗ್ರೆಸ್‌ನವರು ಟೀಕಿಸಲಿ, ಜನಪರವಾಗಿ ಹೋರಾಟ ಮಾಡಲಿ ಎಂದು ಸವಾಲೆಸೆದರು.
    ನಾವು ಹೋರಾಟ ಮಾಡಿಕೊಂಡೇ ಅಧಿಕಾರಕ್ಕೆ ಬಂದವರು. ಯಾವುದೇ ಹೋರಾಟದಲ್ಲಿ ಸತ್ಯವಿಲ್ಲದಿದ್ದರೆ ಅದನ್ನು ಜನ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ವರ್ತನೆಯನ್ನು ಇಡೀ ರಾಜ್ಯದ ಜನತೆ ನೋಡುತ್ತಿದ್ದಾರೆ. ಮುಂದೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    ಕಾಂಗ್ರೆಸ್ ನಾಯಕರು ಮೊದಲು ಭದ್ರಾವತಿಗೆ ತೆರಳಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳನ್ನು ಮಾತನಾಡಿಸಿ ಸತ್ಯಾಂಶ ಅರಿತುಕೊಳ್ಳಬೇಕಿತ್ತು. ಶಿವಮೊಗ್ಗದಲ್ಲಿ ಕಾಂಗ್ರೆಸ್‌ನವರು ನಡೆಸುತ್ತಿರುವ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ. ಕಾಂಗ್ರೆಸ್ ಪಕ್ಷ ಇನ್ನೂ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾಯಕರು ಶಿವಮೊಗ್ಗಕ್ಕೆ ಬಂದಿದ್ದಾರೆ ಎಂದರು.
    ಸಿಡಿ ಪ್ರಕರಣದ ತನಿಖೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಶಯದಂತೆ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಈಗಾಗಲೇ ತನಿಖೆ ನಡೆಯುತ್ತಿದ್ದು ಶೀಘ್ರ ಸತ್ಯಾಂಶ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts