ವಾಲ್ಮೀಕಿ ಸಮಾಜದ ಸಂಘಟನೆಗೆ ಆದ್ಯತೆ

blank

ಶಿಕಾರಿಪುರ: ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಾರ್ವಳ್ಳಿ ಉಮೇಶ್ ಹೇಳಿದರು.

blank

ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಮಾತನಾಡಿ, ಸಮುದಾಯ ಮೊದಲು ಆರ್ಥಿಕ, ಶೈಕ್ಷಣಿಕ, ರಾಜಕೀಯ ಮತ್ತು ಸಾಮಾಜಿಕವಾಗಿ ಬೆಳೆಯುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಚ್.ಟಿ.ಬಳಿಗಾರ್ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ನಿರೀಕ್ಷೆಯಂತೆ ಎಲ್ಲರ ಸಹಕಾರ, ಮಾರ್ಗದರ್ಶನ ಪಡೆದು ಸಂಸ್ಥೆ ಬೆಳೆಸಲು ಶ್ರಮಿಸುತ್ತೇನೆ ಎಂದರು.

ಸಂಘದ ಉಪಾಧ್ಯಕ್ಷ ಎಚ್.ಡಿ.ಮಾದೇವಪ್ಪ, ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಹನುಮಂತಪ್ಪ, ಸುರೇಶ್ ಹೂವಿನ ಮಂಡಿ, ಕೆ.ಎಸ್.ಹುಚ್ರಾಯಪ್ಪ, ಸುರೇಶ್, ಜಗದೀಶ್, ಮಮತಾ ಸಾಲಿ, ಅನ್ನಪೂರ್ಣಮ್ಮ, ಕರಿಬಸಪ್ಪ, ಓಂಕಾರಪ್ಪ, ಸಂಘದ ಕಾರ್ಯದರ್ಶಿ ಕಿರೀಟ ರಾಯ್ಕರ್, ಪ್ರವೀಣ್‌ಕುಮಾರ್, ಅರವಿಂದ್ ಇತರರಿದ್ದರು.

ಸರ್ವ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿ

Share This Article

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…