ಅಥ್ಲೆಟಿಕ್ಸ್‌ನಲ್ಲಿ ಸಾಗರ ವಿದ್ಯಾರ್ಥಿಗಳ ಸಾಧನೆ

blank

ಸಾಗರ: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಾಗರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುತ್ತಾರೆ.

ಡೆಕಥ್ಲಾನ್‌ನಲ್ಲಿ ತೇಜಸ್ ಡಿ. ನಾಯ್ಕ ಚಿನ್ನದ ಪದಕ, ಹೆಪ್ಟಾಥ್ಲಾನ್‌ನಲ್ಲಿ ಎನ್.ಅರ್ಪಿತಾ ಬೆಳ್ಳಿ ಪದಕ, 1500 ಮೀ. ಓಟದಲ್ಲಿ ಎಸ್.ಅನುಷಾ ಬೆಳ್ಳಿ ಪದಕ, 100 ಮೀ. ಹರ್ಡಲ್ಸ್ ಮತ್ತು 400 ಮೀ. ಹರ್ಡಲ್ಸ್‌ನಲ್ಲಿ ಎಚ್.ಎಂ.ಪವನ್ ಕಂಚಿನ ಪದಕ ಪಡೆದಿದ್ದಾರೆ. ಡೆಕಾಥ್ಲಾನ್‌ನಲ್ಲಿ ಎಸ್.ಧ್ರುವ ಕಂಚಿನ ಪದಕ, ತ್ರಿಬಲ್ ಜಂಪ್‌ನಲ್ಲಿ ಎಸ್.ಭರತ್ ಕಂಚಿನ ಪದಕ ಗಳಿಸಿದ್ದಾರೆ.

ಪ್ರಾಚಾರ್ಯ ಡಾ. ಜಿ.ಸಣ್ಣಹನುಮಪ್ಪ, ಕ್ರೀಡಾ ಸಂಚಾಲಕ ಶಿವರಾಯಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಜಿ.ಕೊಟ್ರೇಶಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

 

ಮನುಷ್ಯನಿಗೆ ಅಹಂಕಾರ ಬಂದರೆ ಮೂಲೆಗುಂಪು ನಿಶ್ಚಿತ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…