ಬದುಕುವ ಶೈಲಿಯಿಂದ ಯಶಸ್ಸು

blank

ಶಿಕಾರಿಪುರ: ಪವಿತ್ರ ಗಂಗೆಯನ್ನು ಭೂಮಿಗೆ ತಂದ ಭಗೀರಥರು ಸಂಕಲ್ಪ ಭಾವದಿಂದ ಆಧ್ಯಾತ್ಮಿಕ ಶಕ್ತಿ ಹಾಗೂ ಛಲದ ಪ್ರತೀಕವಾಗಿ ನಮಗೆ ಕಾಣುತ್ತಿದ್ದಾರೆ ಎಂದು ಶಿರಸ್ತೇದಾರ್ ವಿನಯ್ ಆರಾಧ್ಯ ಹೇಳಿದರು.

blank

ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಉಪ್ಪಾರ ಸಮಾಜ, ತಾಲೂಕು ಆಡಳಿತ ಹಾಗೂ ಪುರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಬದುಕಿನಲ್ಲಿ ನಮಗೆ ಯಶಸ್ಸು ಸಾಧಿಸಲು ಇಂತಹ ಶ್ರೇಷ್ಠ ಗುಣ ಅಗತ್ಯ. ಮನುಷ್ಯನ ಸಾಧನೆಯು ಪರಿಶ್ರಮ ಮತ್ತು ಬದುಕುವ ಶೈಲಿ ಮೇಲೆ ನಿರ್ಧಾರವಾಗುತ್ತದೆ ಎಂದು ತಿಳಿಸಿದರು.

ಉಪ್ಪಾರ ಸಮಾಜದ ಅಧ್ಯಕ್ಷ ಹವಳಪ್ಪ ಮಾತನಾಡಿ, ನಮ್ಮ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದೆ. ಸಮಾಜದ ಜನರು ಸಂಘಟಿತರಾಗಬೇಕು. ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ನೀಡಬೇಕು. ಸಮಾಜದ ಜನರು ಶಿಕ್ಷಣದ ಜತೆಗೆ ಕೌಶಲ ವೃತ್ತಿಗಳಿಗೂ ಆದ್ಯತೆ ನೀಡಬೇಕು. ಭಗೀರಥ ಮಹಾರಾಜರ ಬದುಕು ನಮಗೆ ಸ್ಪೂರ್ತಿ ಎಂದರು.

ಉಪ್ಪಾರ ಸಮಾಜದ ಗಿರೀಶ್‌ಕುಮಾರ್ ಅವರು ಭಗೀರಥರ ಬದುಕಿನ ಬಗ್ಗೆ ಉಪನ್ಯಾಸ ನೀಡಿದರು. ಸಮಾಜದ ಮುಖಂಡರಾದ ಸುಭಾಷ್, ಸಿದ್ದಪ್ಪ, ಪುರಸಭೆ ಕಚೇರಿ ವ್ಯವಸ್ಥಾಪಕ ರಾಜ್‌ಕುಮಾರ್, ಪ್ರವೀಣ್ ಇತರರಿದ್ದರು.

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank