ಬೆಂಗಳೂರು: ಕರೊನಾ ಎರಡನೆಯ ಅಲೆಯಿಂದ ಉಂಟಾಗಿರುವ ಲಾಕ್ಡೌನ್ನಿಂದ ಜನ ತೀವ್ರ ಸಂಕಷ್ಟಕ್ಕೆ ಎದುರಾಗಿದ್ದಾರೆ. ಅದರಲ್ಲೂ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಈ ನಿಟ್ಟಿನಲ್ಲಿ ಕನ್ನಡದ ಹಲವು ನಟ-ನಟಿಯರು ಕಾರ್ಮಿಕರ ರಕ್ಷಣೆಗೆ ಬಂದಿದ್ದಾರೆ. ಅವರಿಗೆ ಅಗತ್ಯವಿರುವ ದವಸ-ಧಾನ್ಯಗಳಲ್ಲದೆ, ಕೆಲವರು ನಿತ್ಯ ಆಹಾರ ಸರಬರಾಜು ಮಾಡುತ್ತಿದ್ದಾರೆ.
ಇದನ್ನೂ ಓದಿ: ಶಂಕರ್ ನಿರ್ದೇಶನದ ಚಿತ್ರಗಳನ್ನು ನಿಲ್ಲಿಸಲು ಲೈಕಾ ಪ್ರೊಡಕ್ಷನ್ಸ್ ಪ್ರಯತ್ನ
ಈಗ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಸಹ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಅಭಿಮಾನಿ ಬಳಗವಾದ ಶಿವಣ್ಣ ಬಾಯ್ಸ್ ಜತೆಗೆ ಸೇರಿಕೊಂಡು, ತಾವು ನೆಲೆಸಿರೋ ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ 500 ಜನರಿಗೆ ಊಟ, ತಿಂಡಿ ,ಹಾಗೂ ಟೀ ವ್ಯವಸ್ಥೆಯನ್ನ ಮಾಡಿದ್ದಾರೆ ಶಿವಣ್ಣ. ಈ ಸೇವೆಗೆಂದೇ ಶಿವಣ್ಣ ಬೊಲೇರೋ ಕಾರ್ ಆರೇಂಜ್ ಮಾಡಿದ್ದು, ಈ ವಾಹನದಲ್ಲೇ ಊಟ-ತಿಂಡಿ ಸರಬರಾಜಾಗುತ್ತಿದೆ.
ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್ ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಯ್ತು
“ಆಸರೆ” – ಹಸಿದ ಹೊಟ್ಟೆಗೆ ಕೈ ತುತ್ತು ಅನ್ನೋ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರೋ ಈ ಕಾರ್ಯಕ್ರಮ, ಸದ್ಯ 10ದಿನದವರೆಗೂ ಮುಂದುವರೆಯಲಿದೆ. ಲಾಕ್ಡೌನ್ ಹೀಗೆ ಮುಂದುವರೆದಲ್ಲಿ ಸುಮಾರು 1000 ಜನಕ್ಕೆ ಪ್ರತಿ ದಿನ ಅನ್ನ ದಾಸೋಹ ಮಾಡೋದಕ್ಕೆ ಯೋಜನೆಯನ್ನೂ ಶಿವಣ್ಣ ರೂಪಿಸಿಕೊಂಡಿದ್ದಾರೆ.