ಶಿವಮೊಗ್ಗ: ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಿನ್ನೆ ಆನವಟ್ಟಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ನಟ ಶಿವರಾಜಕುಮಾರ್ ಇಂದು ಬೇಳೂರು ಗೋಪಾಲಕೃಷ್ಣ ಪರವಾಗಿಯೂ ಪ್ರಚಾರ ಕೈಗೊಂಡಿದ್ದಾರೆ.
ಇದನ್ನೂ ಓದಿ: ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಪರ ಇಂದು ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಅವರು, ಪತ್ನಿ ಗೀತಾ ಜೊತೆ ರೋಡ್ ಶೋನಲ್ಲೂ ಭಾಗಿಯಾದರು. ‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ ಹಾಗೂ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ’ ಹಾಡುಗಳನ್ನು ಹಾಡಿದ ಶಿವರಾಜಕುಮಾರ್, ಅಭಿಮಾನಿಗಳನ್ನು ರಂಜಿಸಿದರು.
ಇದನ್ನೂ ಓದಿ: ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್
ಹೊಸನಗರದ ಗವಟೂರಿನಿಂದ ರಿಪ್ಪನ್ಪೇಟೆವರೆಗೂ ತೆರೆದ ವಾಹನದಲ್ಲಿ ಸಾಗಿದ ಗೀತಾ-ಶಿವರಾಜಕುಮಾರ್ ರೋಡ್ ಶೋನಲ್ಲಿ, ಸಾವಿರಾರು ಕಾರ್ಯಕರ್ತರು ಬೈಕ್ನಲ್ಲಿ ಜೊತೆಯಾದರು. ಶಿವಣ್ಣ ದಂಪತಿ ಜೊತೆ ಮಧು ಬಂಗಾರಪ್ಪ, ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ, ಕಲಗೋಡು ರತ್ನಾಕರ್ ಮುಂತಾದವರು ಇದ್ದರು.