More

    ಕಿರೀಟಿ ಸಿನಿಮಾ ಸೆಟ್​ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವರಾಜಕುಮಾರ್​

    ಬೆಂಗಳೂರು: ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ಗ್ರಾಂಡ್​ ಆಗಿ ಪ್ರಾರಂಭವಾಗಿತ್ತು ಮಾಜಿ ಶಾಸಕ ಜನರ್ಧಾನ ರೆಡ್ಡಿ ಅವರ ಮಗ ಕಿರೀಟಿ ಅಭಿನಯದ ಹೊಸ ಚಿತ್ರ. ಈ ಚಿತ್ರದ ಚಿತ್ರೀಕರಣಕ್ಕೆ ಇತ್ತೀಚೆಗೆ ಶಿವರಾಜಕುಮಾರ್​ ಭೇಟಿ ನೀಡಿ ಕಿರೀಟಿ ಮತ್ತು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ಇದನ್ನೂ ಓದಿ: ಲವ್​ಲೀ ವಂಶಿಕಾ; ಕಿರುತೆರೆಯಿಂದ ಬೆಳ್ಳಿತೆರೆಗೆ

    ಇನ್ನೂ ಹೆಸರಿಡದ ಕಿರೀಟಿ ಅಭಿನಯದ ಹೊಸ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಿರ್ಮಿಸುತ್ತಿದ್ದು, ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಅದ್ಧೂರಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಇತ್ತೀಚೆಗೆ ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್ ಪಾರ್ಕ್​ನಲ್ಲಿ ನಡೆಯುತ್ತಿದ್ದ ಚಿತ್ರೀಕರಣಕ್ಕೆ ಶಿವಣ್ಣ ಸರ್ಪ್ರೈಸ್ ಆಗಿ ವಿಸಿಟ್ ಕೊಟ್ಟಿದ್ದಾರೆ.

    ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಅಭಿನಯದ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣ ಸ್ಥಳದಲ್ಲಿ ಹಲವು ಸಮಯ ಕಳೆದ ಶಿವರಾಜಕುಮಾರ್​, ಚಿತ್ರತಂಡದವರಿಗೆ ಶುಭ ಹಾರೈಸಿ ಅಲ್ಲಿಂದ ಹೊರನಡೆದಿದ್ದಾರೆ.

    ಇನ್ನು, ಈ ಚಿತ್ರದ ಶೀರ್ಷಿಕೆಯನ್ನು ಸೆ. 29ಕ್ಕೆ ಅನಾವರಣಗೊಳಿಸಲು ಚಿತ್ರತಂಡ ಸಜ್ಜಾಗಿದೆ. ಅಂದು ಕಿರೀಟಿ ಹುಟ್ಟುಹಬ್ಬವಿದ್ದು, ಈ ಸಂದರ್ಭದಲ್ಲಿ ಶೀರ್ಷಿಕೆ ಬಿಡುಗಡೆ ಮಾಡುವ ಮೂಲಕ ಗಿಫ್ಟ್​ ಕೊಡಬೇಕೆಂದು ಚಿತ್ರತಂಡದ ಯೋಚನೆ. ಸದ್ಯ ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಮುಗಿದಿದ್ದು, ಪೋಸ್ಟ್​-ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ.

    ಇದನ್ನೂ ಓದಿ: 4 ವರ್ಷಗಳಲ್ಲಿ 50 ಬಯೋಪಿಕ್​ಗಳು!; ದೇಶಪ್ರೇಮದ ಕಥೆ, ನೈಜ ಘಟನೆಗಳ ವ್ಯಥೆ

    ಸಾಯಿ ಕೊರಪಾಠಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ದೇವಿ ಶ್ರೀಪ್ರಸಾದ್​ ಸಂಗೀತ ಸಂಯೋಜಿಸುತ್ತಿದ್ದು, ‘ಬಾಹುಬಲಿ’ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರೀಟಿಗೆ ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದು, ಮಿಕ್ಕಂತೆ ರವಿಚಂದ್ರನ್​, ಖುಷ್ಬೂ, ಜೆನಿಲಿಯಾ ಡಿಸೋಜ ಮುಂತಾದವರು ನಟಿಸುತ್ತಿದ್ದಾರೆ.

    ಅ.7ಕ್ಕೆ ಗುಡ್​ಬೈ; ರಶ್ಮಿಕಾ ಎರಡನೆಯ ಚಿತ್ರ ಮೊದಲು ಬಿಡುಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts