ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿರೂರು, ಮಂಜಗುಣಿ, ಅಂಕೋಲಾ ತಾಲೂಕಿನ ವಿವಿಧ ಗ್ರಾಮಕ್ಕೆ ಸಚಿವರು ಭೇಟಿ ನೀಡಿದ್ದಾರೆ. ಅಂಕೋಲಾದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ ಕೊಟ್ಟು ಅಲ್ಲಿನ ನೆರೆ ಸಂತ್ರಸ್ತರನ್ನು ಮಾತನಾಡಿಸಿ ಬಂದಿದ್ದಾರೆ. ಪ್ರವಾಹದಿಂದಾಗಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಈ ವೇಳೆ ಘೋಷಿಸಿದ್ದಾರೆ. ಹಾಗೆಯೇ ನೆರೆಯಿಂದಾಗಿ ಮನೆ ಕಳೆದುಕೊಂಡವರಿಗೆ ಬೇರೆ ಸ್ಥಳದಲ್ಲಿ ಜಾಗ ಕೊಡುವುದಾಗಿ ಭರವಸೆ ಕೊಡಲಾಗಿದೆ.
ಯಾವ ಯಾವ ಗ್ರಾಮದಲ್ಲಿ ಸಂಪರ್ಕ ಕಡಿತವಾಗಿದೆಯೋ ಆ ಎಲ್ಲ ಗ್ರಾಮಗಳಿಗೆ ಶೀಘ್ರವೇ ಸಂಪರ್ಕ ಕಲ್ಪಿಸುವ ವ್ಯವಸ್ಥೆಯಾಗಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹನುಮಾನ್ ಚಾಲಿಸ ಪಠಿಸುತ್ತ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಯುವತಿ