ಹಾಸನ: ಅರಸೀಕೆರೆ ತಾಲೂಕಿನ ಆಲದಹಳ್ಳಿಯಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಲಾಗಿದೆ. ಈ ಪಂದ್ಯಾವಳಿಯ ವಿಜೇತರಿಗೆ ಟ್ರೋಫಿ ಜತೆಗೆ ಕುರಿಮರಿ ಮತ್ತು ವಿಸ್ಕಿ ಬಾಟಲಿ ಸಿಗುತ್ತೆ! ಅಷ್ಟೇ ಅಲ್ಲ, ಸಮಾಧಾನಕರ ಬಹುಮಾನವಾಗಿ ಕೋಳಿಗಳನ್ನು ಕೊಡಲಾಗುತ್ತೆ.
ಅಂದಹಾಗೆ ಈ ಪಂದ್ಯದ ಹೆಸರೇ ‘ಜೋಡಿಮರಿ ಕ್ರಿಕೆಟ್ ಟೂರ್ನಿ’. ಶಿವರಾತ್ರಿ ಪ್ರಯುಕ್ತ ಮೂರು ದಿನ ಅಂದರೆ ಫೆ.10, 11, 12ರವರೆಗೆ ನಡೆಯಲಿರುವ ಈ ಪಂದ್ಯಾವಳಿಯನ್ನು ಗ್ರಾಮದ ಯುವಕರು ಆಯೋಜಿಸಿದ್ದಾರೆ. ಕಿಕೆಟ್ ಟೂರ್ನಿಯ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಜೋಡಿಕುರಿಗಾಗಿ ಕಾದಾಟ ಎಂದೆಲ್ಲ ಕಮೆಂಟ್ ಬರುತ್ತಿದೆ.
‘ಜೋಡಿ ಮರಿ ಕ್ರಿಕೆಟ್ ಟೂರ್ನಿ’ಯಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಜತೆಗೆ ಜೋಡಿಕುರಿ ಮತ್ತು 2 ವಿಸ್ಕಿ ಬಾಟಲಿ, ರನ್ನರ್ಅಫ್ ತಂಡ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ಒಂದು ಕುರಿ ಜತೆಗೆ ಒಂದು ವಿಸ್ಕಿ ಬಾಟಲಿ, ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ ನಾಲ್ಕು ಕೋಳಿ ಕೊಡಲಾಗುತ್ತೆ. ಆಯಾ ಬಹುಮಾನಗಳ ಕೆಳಗೆ ದಾನಿಗಳ ಹೆಸರನ್ನೂ ಪೋಸ್ಟರ್ನಲ್ಲಿ ಹಾಕಿಸಲಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಅವನು ಬಂದಾಗ ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ… ಎಚ್ಡಿಕೆ ವಿರುದ್ಧ ನಾಲಗೆ ಹರಿಬಿಟ್ಟ ಯೋಗೇಶ್ವರ್
ಮಗುವಿಗೆ ಹಾಲುಣಿಸುತ್ತಿದ್ದ ಪತ್ನಿಯ ಎದೆಭಾಗಕ್ಕೆ ಬ್ಲೇಡ್ ಹಾಕಿದ ಪತಿ! ಕಾರಣ ಕೇಳಿದ್ರೆ ಸಿಟ್ಟಿಗೇಳ್ತೀರಿ
ಅವನು ಬಂದಾಗ ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ… ಎಚ್ಡಿಕೆ ವಿರುದ್ಧ ನಾಲಗೆ ಹರಿಬಿಟ್ಟ ಯೋಗೇಶ್ವರ್