ಅಮೃತಸರ: ಶಿವಸೇನೆ ನಾಯಕ ಸುಧೀರ್ ಸುರಿಯನ್ನು ಪಂಜಾಬ್ನ ಅಮೃತಸರದಲ್ಲಿ ಇಂದು (ನ.4) ಭೀಕರವಾಗಿ ಗುಂಡಿಟ್ಟು ಕೊಲ್ಲಲಾಗಿದೆ.
ಅಮೃತಸರದ ಗೋಪಾಲ ಮಂದಿರದ ಬಳಿಯಲ್ಲಿ ನಡೆದ ಸಂಘರ್ಷದಲ್ಲಿ ಸುಧೀರ್ ಸುರಿ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಅವರನ್ನು ಕಾಪಾಡಲು ಸಾಧ್ಯವಾಗಿಲ್ಲ. ಘಟನೆಯ ಸ್ಥಳಕ್ಕೆ ತಕ್ಷಣ ಧಾವಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನೂ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ಅಮೃತಸರದ ಕಮಿಷನರ್ ಅರುಣ್ ಪಾಲ್ ಸಿಂಗ್ ‘ಸುಧೀರ್ ಸುರಿಯ ಮೇಲೆ ಗೋಪಾಲ ಮಂದಿರದ ಹೊರಗೆ ಗುಂಡಿನ ದಾಳಿ ನಡೆದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೊನೆಯುಸಿರು ಎಳೆದಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನು ವಶಕ್ಕೆ ಪಡೆದಿದ್ದೇವೆ’ ಎಂದಿದ್ದಾರೆ. (ಏಜೆನ್ಸೀಸ್)