More

    ಅಮೃತಸರದಲ್ಲಿ ಹಾಡಹಗಲೇ ಶಿವಸೇನೆ ನಾಯಕ ಸುಧೀರ್​ ಸುರಿಯ ಹತ್ಯೆ!

    ಅಮೃತಸರ: ಶಿವಸೇನೆ ನಾಯಕ ಸುಧೀರ್​ ಸುರಿಯನ್ನು ಪಂಜಾಬ್​ನ ಅಮೃತಸರದಲ್ಲಿ ಇಂದು (ನ.4) ಭೀಕರವಾಗಿ ಗುಂಡಿಟ್ಟು ಕೊಲ್ಲಲಾಗಿದೆ.

    ಅಮೃತಸರದ ಗೋಪಾಲ ಮಂದಿರದ ಬಳಿಯಲ್ಲಿ ನಡೆದ ಸಂಘರ್ಷದಲ್ಲಿ ಸುಧೀರ್​ ಸುರಿ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಅವರನ್ನು ಕಾಪಾಡಲು ಸಾಧ್ಯವಾಗಿಲ್ಲ. ಘಟನೆಯ ಸ್ಥಳಕ್ಕೆ ತಕ್ಷಣ ಧಾವಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನೂ ವಶಪಡಿಸಿಕೊಂಡಿದ್ದಾರೆ.

    ಈ ಬಗ್ಗೆ ಹೇಳಿಕೆ ನೀಡಿದ ಅಮೃತಸರದ ಕಮಿಷನರ್ ಅರುಣ್ ಪಾಲ್​ ಸಿಂಗ್ ‘ಸುಧೀರ್​ ಸುರಿಯ ಮೇಲೆ ಗೋಪಾಲ ಮಂದಿರದ ಹೊರಗೆ ಗುಂಡಿನ ದಾಳಿ ನಡೆದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೊನೆಯುಸಿರು ಎಳೆದಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನು ವಶಕ್ಕೆ ಪಡೆದಿದ್ದೇವೆ’ ಎಂದಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts