ಶೋಯೆಬ್ ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ : ತಂಡದ ಮಾಲೀಕನ ಸ್ಪಷ್ಟನೆ ಏನು?

malik

ಢಾಕಾ: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಸನಾ ಜಾವೇದ್‌ರನ್ನು ವಿವಾಹವಾದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಾಗಿನಿಂದ ಎಲ್ಲೆಡೆ ಕೋಲಾಹಲವೇ ಉಂಟಾಗಿದೆ. ಸಾನಿಯಾ ಮಿರ್ಜಾ ಅವರಿಂದ ವಿಚ್ಛೇದನ ಪಡೆದು ಮೂರನೇ ಮದುವೆಯಾದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿರುದ್ಧದ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ವಿರಾಟ್​ ಕೊಹ್ಲಿ ಜೊತೆಗಿನ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಬಿ ಡಿವಿಲಿಯರ್ಸ್?

ಶೋಯೆಬ್ ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ : ತಂಡದ ಮಾಲೀಕನ ಸ್ಪಷ್ಟನೆ ಏನು?

ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಫಾರ್ಚೂನ್ ಬಾರಿಶಾಲ್ ಮಾಲೀಕ ಮಿಜಾನುರ್ ರೆಹಮಾನ್ ಶುಕ್ರವಾರ ಶೋಯೆಬ್ ಮಲಿಕ್ ವಿರುದ್ಧದ ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಮಲಿಕ್ ಯಾವುದೇ ಫಿಕ್ಸಿಂಗ್​ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶೋಯೆಬ್ ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ : ತಂಡದ ಮಾಲೀಕನ ಸ್ಪಷ್ಟನೆ ಏನು?

ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನಿಂದ ಅವರನ್ನು ಹೊರಹಾಕಲಾಗಿದೆ ಎಂಬ ಸುದ್ದಿ ಬಂದ ನಂತರ ವಿಡಿಯೋ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ ಮಿಜಾನುರ್ ರೆಹಮಾನ್, ಶೋಯೆಬ್ ಮಲಿಕ್ ಕುರಿತ ವದಂತಿಯ ಬಗ್ಗೆ ನಾನು ತೀವ್ರವಾಗಿ ಖಂಡಿಸುತ್ತೇನೆ. ಮಲ್ಲಿಕ್​ ಶ್ರೇಷ್ಠ ಆಟಗಾರ. ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುವುದು ತಪ್ಪು. ನಾವು ಸತತ ಎರಡು ಪಂದ್ಯಗಳನ್ನು ಸೋತಿದ್ದೇವೆ. ಆದ್ದರಿಂದ ನಾವು ಮುಂದಿನ ಮ್ಯಾಚ್​ಗಳತ್ತ ಗಮನ ಹರಿಸಬೇಕು ಮತ್ತು ನಾವು ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸವಿದೆ ಎಂದು ರೆಹಮಾನ್ ತಿಳಿಸಿದರು.

ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು ಯಾಕೆ ಗೊತ್ತಾ ?: ಜನವರಿ 22 ರಂದು ಬಾರಿಶಾಲ್ ಮತ್ತು ಖುಲ್ನಾ ಟೈಗರ್ಸ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಬಾರಿಶಾಲ್ ಪರ ಬೌಲಿಂಗ್ ದಾಳಿಗಿಳಿದ್ದ ಮಲಿಕ್ ಕೇವಲ ಒಂದು ಓವರ್ ಬೌಲ್ ಮಾಡಿ 18 ರನ್ ನೀಡಿದ್ದರು. ಈ ಓವರ್​ನಲ್ಲಿ ಮಲಿಕ್ ಬರೋಬ್ಬರಿ 3 ನೋ ಬಾಲ್‌ಗಳನ್ನು ಎಸೆದಿದ್ದರು. ಸಾಮಾನ್ಯವಾಗಿ ವೇಗಿಗಳು ಒಂದು ಓವರ್​ನಲ್ಲಿ ಮೂರು ನೋ ಬಾಲ್ ಎಸೆದರೆ ಯಾರಿಗೂ ಅಚ್ಚರಿಯಾಗುತ್ತಿರಲಿಲ್ಲ. ಆದರೆ ಸ್ಪಿನ್​ ಬೌಲರ್​ ಒಬ್ಬರು ಸತತ ಮೂರು ನೋಬಾಲ್​ ಎಸೆದದ್ದು ನೋಡಿ ಮಲಿಕ್​ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು.​ ಇದಾದ ಬಳಿಕ ಶೋಯೆಬ್ ಮಲಿಕ್ ಇದ್ದಕ್ಕಿದ್ದಂತೆ ಪಂದ್ಯಾವಳಿಯನ್ನು ಮಧ್ಯದಲ್ಲಿ ತೊರೆದು ದುಬೈಗೆ ತೆರಳಿದ್ದಾರೆ ಎಂದು ವರದಿಯಾಗಿತ್ತು.
ಶೋಯೆಬ್ ಮಲಿಕ್ ಏಕದಿನ ಮತ್ತು ಟೆಸ್ಟ್ ಸ್ವರೂಪದಿಂದ ನಿವೃತ್ತರಾಗಿದ್ದಾರೆ. ಆದರೆ ಟಿ20 ಮಾದರಿಯಿಂದ ನಿವೃತ್ತಿಯಾಗಿಲ್ಲ.

INDIA ಮೈತ್ರಿಕೂಟಕ್ಕೆ ಅಘಾತ: ಮತ್ತೆ ಬಿಜೆಪಿ ಜೊತೆ ನಿತೀಶ್​ಕುಮಾರ್​ ದೋಸ್ತಿ!

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…