More

    ಡಿ.ಕೆ. ಶಿವಕುಮಾರ್ ಗೂಂಡಾ ರಾಜಕಾರಣಿ: ಶೋಭಾ ಕರಂದ್ಲಾಜೆ ವಾಗ್ದಾಳಿ


    ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯಾವಾಗಲೂ ಗೂಂಡಾ ರಾಜಕಾರಣ ನಡೆಸುತ್ತಾರೆ. ಆರ್‌ಆರ್ ನಗರ ಉಪ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

    ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್‌ಆರ್ ನಗರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಸಂಸದರಾಗಿದ್ದು, ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದು, ಚುನಾವಣೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

    ಬಿಹಾರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಗೆದ್ದರೆ ಉಚಿತವಾಗಿ ಕರೊನಾ ಲಸಿಕೆ ನೀಡಲಾಗುವುದು ಎಂದು ಘೋಷಣೆ ಮಾಡಿರುವುದರಲ್ಲಿ ತಪ್ಪೇನು ಇಲ್ಲ. ಬಿಹಾರ ಮಾತ್ರವಲ್ಲ ದೇಶದ ಎಲ್ಲ ಭಾಗಗಳಿಗೂ ಉಚಿತವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು. ಇದಕ್ಕೆ ತಗಲುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.

    ಮಾವುತರಿಗೆ ಉಪಹಾರ: ಸಂಸದೆ ಶೋಭಾ ಕರಂದ್ಲಾಜೆ ಶನಿವಾರ ಅರಮನೆ ಆವರಣದಲ್ಲಿ ದಸರಾ ಆನೆ ಮಾವುತರು ಮತ್ತು ಕಾವಾಡಿಗರಿಗೆ ಉಪಹಾರ ನೀಡಿದರು. ಕಳೆದ 12 ವರ್ಷಗಳಿಂದ ಶೋಭಾ ಕರಂದ್ಲಾಜೆ ಅವರು ಆನೆ ಮಾವುತರು ಮತ್ತು ಕಾವಾಡಿಗರಿಗೆ ಉಪಹಾರ ನೀಡುತ್ತಾ ಬರುತ್ತಿದ್ದಾರೆ. ಅಂತೆಯೇ ಈ ಬಾರಿಯೂ ಉಪಹಾರವನ್ನು ನೀಡಿದರು. ಸ್ವತಃ ಶೋಭಾ ಕರಂದ್ಲಾಜೆ ಅವರು ಮಾವುತರು, ಕಾವಾಡಿಗರಿಗೆ ಉಣ ಬಡಿಸಿದರು. ಬಳಿಕ ದಸರಾ ಗಜಪಡೆಯ ಬಳಿಗೆ ತೆರಳಿ ಕಬ್ಬು, ಬೆಲ್ಲ ನೀಡಿ, ಮಾವುತರು ಹಾಗೂ ಕಾವಾಡಿಗಳ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭ ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts