More

    ಶೋಭಾ ರಂಗನಾಥ್‌ಗೆ ಸದ್ಭಾವನಾ ಪ್ರಶಸ್ತಿ

    ದಾವಣಗೆರೆ: ಇಲ್ಲಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಗೀತ ಶಿಕ್ಷಕಿ ಶೋಭಾ ರಂಗನಾಥ್, ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಎಸ್.ಬಾಲಾಜಿ, ವಿಜಯಪುರ ಜಿಲ್ಲಾಧ್ಯಕ್ಷ ಪುಂಡಲೀಕ ಮುರಳಿ ಅವರನ್ನೊಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.

    ಮುದ್ದೇಬಿಹಾಳದ ವಿ.ಬಿ.ಸಿ ಮೈದಾನದಲ್ಲಿ ಜ.29 ರಂದು ನಡೆಯಲಿರುವ ಸ್ವಾಮಿ ವಿವೇಕಾನಂದ ಜಯಂತಿ ರಾಜ್ಯ ಯುವ ಸಮ್ಮೇಳನದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದು ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷ ಎನ್.ಕೆ. ಕೊಟ್ರೇಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts