More

    ಪತ್ನಿ ಸ್ನಾನ ಮುಗಿಸಿ ಬರುವಷ್ಟರಲ್ಲಿ ತಂದೆಯಿಂದಲೇ ಮಕ್ಕಳ ಬರ್ಬರ ಹತ್ಯೆ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ!​

    ಲಂಡನ್​: ಪತ್ನಿಯು ಶೌಚಗೃಹದಿಂದ ಸ್ನಾನ ಮುಗಿಸಿ ಬರುವಷ್ಟರಲ್ಲಿ ತನ್ನಿಬ್ಬರು ಮಕ್ಕಳನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಿ ತಂದೆ ತನ್ನ ತಪ್ಪನ್ನು ಇದೀಗ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾನೆ.

    ನಾದರಾಜ ನಿಥಿಯಾಕುಮಾರ್​ (40) ಮಕ್ಕಳನ್ನೇ ಕೊಲೆಗೈದ ಆರೋಪಿ. ಈತ ಅಂಗಡಿಯೊಂದರ ಮಾಲೀಕನಾಗಿದ್ದು, ಮೂರು ವರ್ಷದ ಗಂಡು ಮಗು ನಿಗಿಶ್​ ನಿಥಿಯಾಕುಮಾರ್​ ಹಾಗೂ 19 ತಿಂಗಳ ಹೆಣ್ಣು ಮಗು ಪವಿನ್ಯಾ ನಿಥಿಯಾಕುಮಾರ್​ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಘಟನೆ ಪೂರ್ವ ಲಂಡನ್​ನ ಇಲ್​ಫೋರ್ಡ್​ನಲ್ಲಿರುವ ನಿವಾಸದಲ್ಲಿ​​ ನಡೆದಿತ್ತು.

    ಪತ್ನಿ ನಿಶಾ ಸ್ನಾನಕ್ಕೆ ಹೋಗಿ ಬರುವಷ್ಟರಲ್ಲಿ ಪತಿ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದಿದ್ದ. ಏಪ್ರಿಲ್​ 26 ಸಂಜೆ 6 ಗಂಟೆಗೆ ಘಟನೆ ನಡೆದಿತ್ತು. ಮಗು ಪವಿನ್ಯಾ ಘಟನಾ ಸ್ಥಳದಲ್ಲೇ ಮೃತಪಟ್ಟರೆ, ನಿಗಿಶ್​​ ಘಟನೆ ನಡೆದ ಎರಡು ಗಂಟೆಯ ನಂತರ ರಾಯಲ್​​ ಲಂಡನ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ಆರೋಪಿ ತಂದೆ ನಾದರಾಜ ಕೂಡ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಸೋಲಿನ ಸುಳಿವು ಸಿಗುತ್ತಿದ್ದಂತೆ ಟ್ವೀಟ್​ ಮೂಲಕ ಡೊನಾಲ್ಡ್​ ಟ್ರಂಪ್​ ಅಸಮಾಧಾನ..!

    ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಶಾಪ್​ನಲ್ಲಿ ಕೆಲಸ ಮಾಡುತ್ತಾ ಖಿನ್ನತೆಗೆ ಒಳಗಾಗಿದ್ದೆ. ಕೆಲ ಗ್ರಾಹಕರ ವರ್ತನೆಯಿಂದ ದುಃಖಿತನಾಗಿದ್ದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆ ರೀತಿ ಮಾಡಿದರೆ ಮಕ್ಕಳ ಭವಿಷ್ಯ ನಾಶವಾಗುತ್ತದೆ ಎಂದು ಮೊದಲು ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

    ಲಂಡನ್​ನ ಓಲ್ಡ್​ ಬೈಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ತಪ್ಪೊಪ್ಪಿಕೊಂಡಿರುವ ಆರೋಪಿಗೆ ಕಠಿಣ ಶಿಕ್ಷೆ ಜಾರಿಯಾಗುವ ಸಾಧ್ಯತೆ ಇದೆ. ಅಂದಹಾಗೆ ಆರೋಪಿ ತಮಿಳುನಾಡು ಮೂಲದವನು. (ಏಜೆನ್ಸೀಸ್​)

    ಪತ್ನಿ ಸ್ನಾನ ಮುಗಿಸಿ ಬರುವಷ್ಟರಲ್ಲಿ ನಡೆದಿತ್ತೊಂದು ಭೀಕರ ಘಟನೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts