ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಿಸಿದ ಮುಸ್ಲಿಂ ಬಾಂಧವರು

blank

ರಾಣೆಬೆನ್ನೂರ: ಅಲ್ಲಾನ ಆರಾಧನೆ ಮತ್ತು ಉಪವಾಸ ಮಾಸದ ಪ್ರತೀಕವಾದ ಪವಿತ್ರ ರಂಜಾನ್ ಹಬ್ಬವನ್ನು ನಗರದ ಮುಸ್ಲಿಂ ಬಾಂಧವರು ಗುರುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಇಲ್ಲಿನ ಮಾರುತಿ ನಗರದ ಈದ್ಗಾ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಸಮಾಜದ ಬಾಂಧವರು ಮೌಲ್ವಿಗಳ ಸಮ್ಮುಖದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಬಾಲವೃದ್ಧರಾಗಿ ಹೊಸಬಟ್ಟೆಗಳನ್ನು ಧರಿಸಿದ ಎಲ್ಲರೂ ಒಂದಾಗಿ ಬಂದು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಒಬ್ಬರಿಗೊಬ್ಬರು ಆಲಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯ ಕೋರಿದರು. ಉಳ್ಳವರು ಇಡೀ ವರ್ಷದ ಆದಾಯದಲ್ಲಿ ಉಳಿತಾಯ ಮಾಡಿದ ಹಣದಲ್ಲಿ ಬಡವರಿಗೆ ದವಸ, ಧಾನ್ಯಗಳನ್ನು ಕಾಣಿಕೆಯಾಗಿ ನೀಡಿದರು.
ಅಂಜುಮನ್ ಸಂಸ್ಥೆ ಅಧ್ಯಕ್ಷ ಎಚ್.ಎಫ್. ಬಿದರಿ, ಉಪಾಧ್ಯಕ್ಷ ಜಬೀವುಲ್ಲಾ ದಾವಣಗೇರಿ, ಕಾರ್ಯದರ್ಶಿ ರಫೀಕ್ ಮೆಣಸಿನಕಾಯಿ, ಖಜಾಂಚಿ ಆರ್.ಬಿ. ಕುಪ್ಪೇಲೂರ, ಸದಸ್ಯರಾದ ಶೇರುಖಾನ ಕಾಬೂಲಿ, ಬಾಷಾಸಾಬ ಹಾವನೂರ, ಅತಾವುಲ್ಲಾ ಉದಗಟ್ಟಿ, ಅಬ್ದುಲ್ ವಹಾಬ್ ಶಾಫಿ, ನೂರುಲ್ಲಾ ಖಾಜಿ ಮತ್ತಿತರರು ಪಾಲ್ಗೊಂಡಿದ್ದರು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…