ನವದೆಹಲಿ: ರಾಷ್ಟ್ರದ ವಿವಿಧ ಕಡೆಗಳಲ್ಲಿ ಇರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರರಿಗೆ ತಮ್ಮ ಊರುಗಳಿಗೆ ತೆರಳಲು ಶ್ರಮಿಕ್ ವಿಶೇಷ ರೈಲುಗಳ ಸಂಚಾರಕ್ಕೆ ರೈಲ್ವೇ ಮಂಡಳಿ ಮುಂದಾಗಿದೆ.
ಕೇಂದ್ರ ಸರ್ಕಾರ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರು ಲಾಕ್ಡೌನ್ ಹಿನ್ನೆಲೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಇವರನ್ನು ಸುರಕ್ಷಿತವಾಗಿ ಸ್ವಂತ ಊರುಗಳಿಗೆ ಮರಳಿಸಲು ಕೇಂದ್ರ ಸರ್ಕಾರ ನೀತಿ ರೂಪಿಸಿದೆ.
ಸಾರ್ವಜನಿಕ ಸಾರಿಗೆ ಸಂಸ್ಥೆ ಹಾಗೂ ವಿಶೇಷ ರೈಲುಗಳಲ್ಲಿ ಜನರನ್ನು ಸ್ವಂತ ಊರುಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಮಂಡಳಿ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ.
ನೋಡಲ್ ಅಧಿಕಾರಿಗಳ ನೇಮಕ: ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರನ್ನು ಸ್ವಂತ ಊರುಗಳಿಗೆ ತಲುಪಿಸಲು ಭಾರತೀಯ ರೈಲ್ವೇ ಮಂಡಳಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.
ಈ ಅಧಿಕಾರಿಗಳು ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಿದ್ದಾರೆ.
ನೋಡಲ್ ಅಧಿಕಾರಿಗಳು ರೈಲು ನಿಲ್ದಾಣದಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಟಿಕೆಟ್ ವಿತರಣೆ ಸೇರಿದಂತೆ ಇತರೆ ಸೇವೆಗಳನ್ನು ನೀಡಲಿದ್ದಾರೆ.
ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಕೈಗೆ ಸೀಲು ಹಾಕಲಿದ್ದಾರೆ. ಸ್ವಂತ ಊರುಗಳಿಗೆ ತೆರಳಿದವರು ವೈದ್ಯರು ಹೇಳಿದಷ್ಟು ದಿನ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ವಿಶೇಷ ರೈಲುಗಳಲ್ಲಿ ಆಗಮಿಸಿದವರ ಎಲ್ಲ ಮಾಹಿತಿಯನ್ನು ರೈಲ್ವೇ ಮಂಡಳಿ ಆಯಾ ರಾಜ್ಯ ಸರ್ಕಾರಗಳಿಗೆ ನೀಡಲಿದೆ. (ಏಜೆನ್ಸೀಸ್)
ಮಹಾರಾಷ್ಟ್ರದಲ್ಲಿ ಉದ್ಭವಿಸಬಹುದಾಗಿದ್ದ ಸಂವಿಧಾನ ಬಿಕ್ಕಟ್ಟಿಗೆ ಬ್ರೇಕ್, ಮೇ 21ಕ್ಕೆ ವಿಧಾನಪರಿಷತ್ ಚುನಾವಣೆ ಘೋಷಣೆ