ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ದಕ್ಷಿಣ ಕನ್ನಡ ಉಪನಿರ್ದೇಶಕರ ಕಚೇರಿ ಸುಳ್ಯ, ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆ ಗುತ್ತಿಗಾರು, ಸ.ಪ.ಪೂ ಕಾಲೇಜು ಗುತ್ತಿಗಾರು (ಪ್ರೌಢಶಾಲಾ ವಿಭಾಗ) ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ವಿಭಾಗದಲ್ಲಿ ಧನ್ವಿ ಆಲ್ರೌಂಡರ್ ಪ್ರಶಸ್ತಿಯನ್ನು ಹಾಗೂ ದೀಕ್ಷಾ ಎಸ್ ಬೆಸ್ಟ್ ಡಿಫೆಂಡರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಶ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರುಗಳಾದ ಸತೀಶ್ ಭಟ್ ಸಹಕರಿಸಿದರು.