More

    ಧರ್ಮಸ್ಥಳ ಕ್ಷೇತ್ರದಿಂದ 10 ಲಕ್ಷ ರೂ. ನೆರವು

    ಮಂಗಳೂರು: ನಗರದ ಕೇಶವ ಸ್ಮತಿ ಸಂವರ್ಧನ ಸಮಿತಿ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ 10 ಲಕ್ಷ ರೂ. ಮೊತ್ತ ಅನುದಾನ ಮಂಜುರಾತಿ ಮಾಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು 10 ಲಕ್ಷ ರೂ. ಮೊತ್ತದ ಡಿಡಿಯನ್ನು ಕೇಶವ ಸ್ಮತಿ ಸಂವರ್ಧನ ಸಮಿತಿ ಅಧ್ಯಕ್ಷ ಡಾ. ವಾಮನ ಶೆಣೈ ಹಾಗೂ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಮಹಾಬಲ ಚೌಟ, ಉಪಾಧ್ಯಕ್ಷ ಪ್ರಶಾಂತ್ ಪೈ, ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್ಯ, ಗಜಾನನ ಪೈ, ಸುನೀಲ್ ಆಚಾರ್, ಶಾಂತಾರಾಮ್ ಪೈ, ಹರಿಕೃಷ್ಣ , ಒಕ್ಕೂಟ ಅಧ್ಯಕ್ಷೆ ಅಶ್ವಿನಿ,ಮಾಜಿ ಅಧ್ಯಕ್ಷೆ ಗಾಯತ್ರಿ ಶೆಟ್ಟಿ, ಒಕ್ಕೂಟ ಪದಾಧಿಕಾರಿಗಳು, ಸುರಕ್ಷಾ ಸಹಾಯಕ ವಸಂತ ಪೆರಾಜೆ, ಮೇಲ್ವಿಚಾರಕಿ ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts