ಕಳೆದ ವರ್ಷ ಬಿಡುಗಡೆಯಾದ ‘ಪಡ್ಡೆ ಹುಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟ ಹಿರಿಯ ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜುಗೆ ಇಂದು (ಏಪ್ರಿಲ್ 5) ಹುಟ್ಟುಹಬ್ಬದ ಸಂಭ್ರಮ. ‘ವಿಷ್ಣು ಪ್ರಿಯ’ ಎಂಬ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿರುವ ಶ್ರೇಯಸ್ಗೆ ಚಿತ್ರತಂಡದವರು ಗಿಫ್ಟ್ ಕೊಟ್ಟಿದ್ದಾರೆ. ಆ ಗಿಫ್ಟ್ ಏನು ಗೊತ್ತಾ?
ಶ್ರೇಯಸ್ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡದವರು ‘ವಿಷ್ಣು ಪ್ರಿಯ’ ಚಿತ್ರದ ಎರಡು ಪೋಸ್ಟರ್ಗಳನ್ನು ಬಿಡುಗಡೆ ಮಾಡಿದ್ದಾರೆ. ಒಂದು ಪೋಸ್ಟರ್ನಲ್ಲಿ ರೊಮ್ಯಾಂಟಿಕ್ ಹೀರೋ ಆಗಿ ಕಾಣಿಸಿಕೊಂಡಿರುವ ಶ್ರೇಯಸ್, ಎರಡನೆಯ ಪೋಸ್ಟರ್ನಲ್ಲಿ ಆ್ಯಕ್ಷನ್ ಹೀರೋ ಆಗಿ ಮಿಂಚಿದ್ದಾರೆ. ಈ ಎರಡೂ ಪೋಸ್ಟರ್ಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿದೆ.
‘ವಿಷ್ಣು ಪ್ರಿಯ’ ಚಿತ್ರವನ್ನು ಕೆ. ಮಂಜು ನಿರ್ಮಿಸಿದ್ದು, ಖ್ಯಾತ ಮಲಯಾಳಂ ನಿರ್ದೇಶಕ ವಿ.ಕೆ. ಪ್ರಕಾಶ್ ನಿರ್ದೇಶಿಸಿದ್ದಾರೆ. ಇದೊಂದು ಲವ್ ಕಂ ಆ್ಯಕ್ಷನ್ ಚಿತ್ರವಾಗಿದ್ದು, ಶ್ರೇಯಸ್ ಎದುರು ನಾಯಕಿಯಾಗಿ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಹ ಆಗಿವೆ. ಈ ಚಿತ್ರದ ಮೂಲಕ ಮಲಯಾಳಂನ ಜನಪ್ರಿಯ ಸಂಗೀತ ನಿರ್ದೇಶಕ ಗೋಪಿ ಸುಂದರ್, ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.