ಬೆಂಗಳೂರು: ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಚಿತ್ರವೊಂದರಲ್ಲಿ ನಟಿಸುತ್ತಿರುವುದು ಈಗಾಗಲೇ ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ‘ದಿಲ್ದಾರ್’ ಎಂದು ನಾಮಕರಣ ಮಾಡಲಾಗಿದೆ. ಅಷ್ಟೇ ಅಲ್ಲ, ಚಿತ್ರದ ಮುಹೂರ್ತ ಸಹ ಇಂದು ಮುಗಿದಿದ್ದು, ಈ ಸಂದರ್ಭದಲ್ಲಿ ರವಿಚಂದ್ರನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದಾರೆ.
ಇದನ್ನೂ ಓದಿ: ಒಬ್ಬರು ಫ್ಲವರ್; ಇನ್ನೊಬ್ಬರು ಫೈರ್!
‘ದಿಲ್ದಾರ್’ ಚಿತ್ರವು ಒಂದು ಕಾಲೇಜ್ ಲವ್ಸ್ಟೋರಿಯಾಗಿದ್ದು, ಮಧು ಗೌಡ ಗಂಗೂರು ನಿರ್ದೇಶಿಸುತ್ತಿದ್ದಾರೆ. ಕೆಲವು ಧಾರಾವಾಹಿಗಳಲ್ಲದೇ, ಸಿನಿಮಾಗಳಲ್ಲೂ ಕೆಲಸ ಮಾಡಿರುವ ಶ್ರೇಯಸ್ಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ಇನ್ನು, ಶ್ರೇಯಸ್ಗೆ ನಾಯಕಿಯಾಗಿ ‘ಬ್ಯಾಡ್ ಮ್ಯಾನರ್ಸ್’ ಮತ್ತು ‘ಅದ್ದೂರಿ ಲವರ್’ ಚಿತ್ರಗಳಲ್ಲಿ ನಟಿಸಿದ್ದ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ.
ಈ ಚಿತ್ರಕ್ಕೆ ಶ್ರೇಯಸ್ಗೆ ರವಿಚಂದ್ರನ್ ಜತೆಗೆ ಹಲವು ನಿರ್ದೇಶಕರು ಬೆಂಬಲ ಕೊಟ್ಟಿದ್ದಾರಂತೆ. ಈ ಕುರಿತು ಮಾತನಾಡುವ ಅವರು, ‘ನನ್ನ ಚಿತ್ರಕ್ಕೆ ಶುಭಕೋರಲು ಬಂದ ಎಲ್ಲಾ ನಿರ್ದೇಶಕರಿಗೂ ಧನ್ಯವಾದ ತಿಳಿಸುತ್ತೇನೆ. ಪ್ರತಿಯೊಬ್ಬ ನಿರ್ದೇಶಕರ ಹತ್ತಿರವೂ ಒಂದೊಂದು ಟಿಪ್ಸ್ ತಗೊಂತಿನಿ. ರವಿಚಂದ್ರನ್, ಯಶ್ ನನಗೆ ಬಹಳ ಬೆಂಬಲ ಕೊಟ್ಟಿದ್ದಾರೆ. ಇಂಥದ್ದೊಂದು ಅವಕಾಶ ಕೊಟ್ಟಿದ್ದಿಕ್ಕೆ ನಿರ್ದೇಶಕ ಮಧು ಅವರಿಗೆ ಥ್ಯಾಂಕ್ಸ್. ಮುಂದಿನ ತಿಂಗಳನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ಸ್ವಲ್ಪ ಸಮಯ ಇದೆಯಾದರೂ, ನಾಳೆಯಿಂದ ರಿಹರ್ಸಲ್ಗಳು ಪ್ರಾರಂಭವಾಗಲಿದೆ’ ಎಂದು ಮಾಹಿತಿ ಕೊಟ್ಟರು.
ಶೀರ್ಷಿಕೆ ಇಟ್ಟಾಗ, ಇಂಥದ್ದೊಂದು ಟೈಟಲ್ ಯಾರಿಗೆ ಸೂಕ್ತ ಎಂದು ಯೋಚಿಸಿದರಂತೆ ನಿರ್ದೇಶಕ ಮಧು. ಕೊನೆಗೆ ಶ್ರೇಯಸ್ ನೆನಪಾಗಿದರಂತೆ. ‘ಈ ಸಿನಿಮಾ ಕೇವಲ ನನ್ನಿಂದ ಅಲ್ಲ. ನನ್ನ ತಂಡದ ಸಪೋರ್ಟ್ ನಿಂದ ಸಾಧ್ಯವಾಗಿದೆ. ಕತೆ ರೆಡಿ ಮಾಡಿದಾಗ ‘ದಿಲ್ದಾರ್’ ಟೈಟಲ್ ಫಿಕ್ಸ್ ಮಾಡಿದಾಗ, ಆ ಹೆಸರಿಗೆ ಯಾರು ಸೂಕ್ತ ಎಂದು ಯೋಚಿಸಿದಾಗ, ಶ್ರೇಯಸ್ ಮಂಜು ನೆನಪಾದರು’ ಎಂದರು.
ಇದನ್ನೂ ಓದಿ: ಅಲೆಮಾರಿ ಜನರನ್ನು ಸಿನಿಮಾ ನೋಡಲು ಒಳಗೆ ಬಿಡದ ಮಲ್ಟಿಪ್ಲೆಕ್ಸ್ ಸಿಬ್ಬಂದಿ!
‘ದಿಲ್ದಾರ್’ ಚಿತ್ರವನ್ನು ಏಷ್ಯಾನೆಟ್ ಮೂವೀ ಬ್ಯಾನರ್ನಡಿ ಆರ್ ಸಂತೋಷ್ ಕುಮಾರ್ ನಿರ್ಮಿಸುತ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣವಿದೆ.
ಅಕಟಕಟಾ ನಟಿಯಿಂದ ಇಂಥಾ ಮಾತಾ! ರಾತ್ರಿ ಪ್ರಯಾಣ ಮಾಡುವಾಗ ಈ ರೀತಿ ಮಾಡ್ತಾರಂತೆ ನಿಮಿಷಾ