ಧಾರವಾಡ: ಇಲ್ಲಿನ ಶಾಂತಿನಿಕೇತನನಗರದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ 21ನೇ ವಾರ್ಷಿಕೋತ್ಸವ ಸಮಾರಂಭ ಏ. 3ರಿಂದ ಆರಂಭಗೊAಡಿದ್ದು, 9ರವರೆಗೆ ಜರುಗುವುದು. ೭ರಂದು ಸಂಜೆ ೪ ಗಂಟೆಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ೮ರಂದು ದೇವಿಗೆ ವಿಶೇಷ ಪೂಜೆ, ಅಭಿಷೇಕ, ಭಜನೆ ಹಾಗೂ ಪಲ್ಲಕ್ಕಿ ಉತ್ಸವ ನಡೆಯಲಿದೆ. ೯ರಂದು ಸುಪ್ರಭಾತ, ಪೂಜೆ, ಸಂಕಲ್ಪ ಅಭಿಷೇಕ, ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮವಿದೆ. ನಂತರ ಪಲ್ಲಕ್ಕಿ ಉತ್ಸವ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಗುವುದು.