More

    ನಿಧಿ ಸಂಗ್ರಹಕ್ಕಾಗಿ ಶ್ರೀಗಳ ಪಾದಯಾತ್ರೆ

    ಲಕ್ಷ್ಮೇಶ್ವರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ವಣಕ್ಕಾಗಿ ಶನಿವಾರ ಪಟ್ಟಣದಲ್ಲಿ ನಿಧಿ ಸಮರ್ಪಣಾ ಅಭಿಯಾನದ ಪಾದಯಾತ್ರೆ ಯಶಸ್ವಿಯಾಗಿ ನೇರವೇರಿತು.

    ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನ ಮುಖ್ಯ ರಸ್ತೆಗಳ ಮೂಲಕ ಸಾಗಿ ಸೋಮೇಶ್ವರ ದೇವಸ್ಥಾನದವರೆಗೆ ಸಾಗಿದ ಪಾದಯಾತ್ರೆಯಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ, ಸಂಕದಾಳದ ವಾಗೀಶ ಪಂಡಿತಾರಾಧ್ಯ ಹಾಲಸ್ವಾಮಿ, ಬೆಳ್ಳಟ್ಟಿ ರಾಮಲಿಂಗೇಶ್ವರಮಠದ ಬಸವರಾಜ ಮಹಾಸ್ವಾಮಿ ಮತ್ತು ಲಕ್ಷ್ಮೇಶ್ವರ ಕರೇವಾಡಿಮಠದ ಮಳೆ ಮಲ್ಲಿಕಾರ್ಜುನ ಸ್ವಾಮೀಜಿ ಪಾಲ್ಗೊಂಡಿದ್ದರು.

    ಶಾಸಕ ರಾಮಣ್ಣ ಲಮಾಣಿ, ರಾಮ ಮಂದಿರ ನಿಧಿ ಸಂಗ್ರಹ ಸಮಿತಿಯ ಪ್ರಮುಖರು, ಜನಪ್ರತಿನಿಧಿಗಳು, ಯುವಕ ಮಿತ್ರರು, ಸಂಘಟನೆಯವರು, ರಾಮಭಕ್ತರು ಪಾಲ್ಗೊಂಡಿದ್ದರು. ಅಲ್ಲದೆ, 16 ವರ್ಷದೊಳಗಿನ ಮಕ್ಕಳು ರಾಮ, ಸೀತೆ, ಲಕ್ಷ್ಮಣ, ಹನುಮನ ವೇಷತೊಟ್ಟು ಗಮನ ಸೆಳೆದರು.

    ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಜನತೆ ರಂಗೋಲಿ, ಪುಷ್ಪ ಹಾಕಿ ಸ್ವಾಗತ ಕೋರಿದರು. ಬಳಿಕ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀಗಳ ಉಪಸ್ಥಿತಿಯಲ್ಲಿ ನಿಧಿ ಸಮರ್ಪಣ ಧರ್ಮ ಸಭೆ ಜರುಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts