More

    ಶ್ರೀ ಮೂಲಸ್ಥಾನೇಶ್ವರಸ್ವಾಮಿ ದೇಗುಲದಲ್ಲಿ ಶಯನೋತ್ಸವ

    ತಿ.ನರಸೀಪುರ: ಹಳೇ ಸಂತೆಮಾಳದ ಶ್ರೀ ಶಿವಕಾಮ ಸುಂದರಿ ಅಮ್ಮನವರ ಸಮೇತ ಅನಾದಿ ಶ್ರೀ ಮೂಲಸ್ಥಾನೇಶ್ವರಸ್ವಾಮಿ ರಥೋತ್ಸವ ಪ್ರಯುಕ್ತ ಶಯನೋತ್ಸವ ಜರುಗಿತು.


    ದೇವಾಲಯದಲ್ಲಿ ರುದ್ರಾಭಿಷೇಕ ಸೇರಿದಂತೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ಶ್ರೀ ಅನಾದಿ ಮೂಲಸ್ಥಾನೇಶ್ವರಸ್ವಾಮಿಗೆ ಅರ್ಧನಾರೀಶ್ವರಸ್ವಾಮಿ ಅಲಂಕಾರ ಮಾಡಲಾಗಿತ್ತು. ರಥೋತ್ಸವ ಮುಗಿದ ಬಳಿಕ ಮಂಗಳವಾರ ರಾತ್ರಿ ಉತ್ಸವಮೂರ್ತಿಗೆ ಆಭರಣ ಹಾಗೂ ವಿವಿಧ ಪುಷ್ಪಗಳಿಂದ ಅಲಂಕರಿಸಲಾಯಿತು.


    ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆಗಮಿಕ ನೀಲಕಂಠ ದೀಕ್ಷಿತ್ ಹಾಗೂ ಶ್ರೀ ಅನಾದಿ ಮೂಲಸ್ಥಾನೇಶ್ವರಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಟಿ.ಎಸ್.ರಾಘವೇಂದ್ರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಅರ್ಚಕರಾದ ಬಿ.ಶೇಷನ್, ಆರ್.ಅರ್ಜುನ್, ಉದ್ಯಮಿ ಎನ್.ರೇಣುಕಾಪ್ರಸಾದ್(ಮಧು), ಎನ್.ಶ್ರೀಕಂಠಪ್ರಸಾದ್(ಚಂದು) ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts